ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಿಸಿ 30 ಕೋಟಿಗೆ ಬೇಡಿಕೆ ಇಟ್ಟಿದ್ದರು ಎಂದು ವರ್ತೂರು ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕೋಲಾರದ ಬೆಗ್ಲಹೊಸಹಳ್ಳಿ ಗ್ರಾಮದ ಬಳಿಯ ಫಾರ್ಮ್ ಹೌಸ್ ನಲ್ಲಿ ಕಾರು ಚಾಲಕ ಸುನೀಲ್ ಸಮೇತ ಪ್ರಕಾಶ್ ಅವರನ್ನುದುಷ್ಕರ್ಮಿಗಳ ತಂಡ ಅಪಹರಿಸಿ ಹಲ್ಲೆ ಸಹ ಮಾಡಿದೆ. ಬಿಡುಗಡೆಗೆ 30 ಕೋಟಿಗೆ ಬೇಡಿಕೆ ಇಟ್ಟಿದ್ದರು ಎಂದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚಿತ್ರಹಿಂಸೆ ನೀಡಿದ್ದ ಆರೋಪಿಗಳು, ಕಾರಿನಲ್ಲಿ ಸುತ್ತಾಡಿಸಿ ಹೊಸಕೋಟೆ ಬಳಿ ಬಿಟ್ಟು ಹೋಗಿದ್ದರು. ನಂತರ, ಸಾರ್ವಜನಿಕರೊಬ್ಬರ ವಾಹನದಲ್ಲಿ ಠಾಣೆಗೆ ಬಂದು ಪ್ರಕಾಶ್ ಅವರು ದೂರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.



