ಡಿವಿಜಿ ಸುದ್ದಿ, ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನಿವೃತ್ತ ಪ್ರಾಂಶುಪಾಲರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಹುಬ್ಬಳ್ಳಿಯ ಲಿಂಗರಾಜನಗರದ ಕಟ್ಟಿ ಮಂಗಳಮ್ಮ ದೇವಸ್ಥಾನ ಬಳಿ ಈ ಕೊಲೆ ನಡೆದಿದ್ದು, ನಿವೃತ್ತ ಪ್ರಾಂಶುಪಾಲರಾಗಿದ್ದ ಎಸ್.ಎಸ್ ಮುಶಣ್ಣನವರ ಕೊಲೆಯಾಗಿದೆ. ಕೊಲೆಗೆ ನಿಜವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಕೊಲೆಗೆ ಕೌಟುಂಬಿಕ ಕಾರಣ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಹತ್ಯೆಯಲ್ಲಿ ಯಾರ ಕೈವಾಡವಿದೆ ಎಂಬುದನ್ನ ಪತ್ತೆ ಮಾಡಲು ಡಿಸಿಪಿ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ತನಿಖೆ ಮುಂದುವರೆಸಿದ್ದಾರೆ.ಘಟನೆಯ ನಂತರ ಇದೀಗ ಶವವನ್ನ ಕಿಮ್ಸ್ ಗೆ ರವಾನೆ ಮಾಡಲಾಗಿದ್ದು, ನವನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



