ಭೀಕರ ಅಪಘಾತ;  ಮೂರು ಸಾವು ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಕೊಪ್ಪಳ: ಮಿನಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶುಕ್ರವಾರ ಕುಕನೂರು ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.

ಕೊಪ್ಪಳ ತಾಲೂಕಿನ ಹಿರೇ ಸಿಂದೋಗಿ ಗ್ರಾಮದ ಕೊಳ್ಳಿ ಮನೆತನದಲ್ಲಿ ಹೋಳಿಗೆ ಊಟ ಆಯೋಜಿಸಲಾಗಿತ್ತು. ಇದಕ್ಕಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ‌  ಮಿನಿ ಬಸ್ ನಲ್ಲಿ  ಜನರು ಆಗಮಿಸುತ್ತಿದ್ದರು. ನಿಟ್ಟಾಲಿ ಬಳಿ ಬೈಕ್ ಸವಾರ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ರಸ್ತೆ ಪಕ್ಕದ ತಗ್ಗಿಗೆ ನುಗ್ಗಿ ಮರಕ್ಕೆ ಗುದ್ದಿದೆ.

ಇದರಿಂದ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಬೈಕ್ ಸವಾರ ಕೂಡ ಸಾವನ್ನಪ್ಪಿದ್ದಾನೆ. ಮೃತರನ್ನು ರಂಗಪ್ಪ ನಾಗಣ್ಣವರ (80 ), ಭೀಮವ್ವ ಗೋಡಿ (70 ) ಮತ್ತು ಬೈಕ್ ಸವಾರ ಸಂತೋಷ್ (22 ) ಎಂದು ಗುರುತಿಸಲಾಗಿದೆ. ಆರು ಜನರು ತೀವ್ರವಾಗಿ ಗಾಯಗೊಂಡಿದ್ದು ಅವರ ಸ್ಥಿತಿಯು ಚಿಂತಾಜನಕವಾಗಿದೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *