ಬೆಂಗಳೂರಿನ ಮಾಜಿ ಕಾರ್ಪೋರೇಟರ್ ಪತ್ನಿ ನೇಣಿಗೆ ಶರಣು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ನಗರದ ಬಸವನಪುರ ವಾರ್ಡ್ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆಯ ಕೊಣೆಯಲ್ಲಿ ನೇಣು ಹಾಕಿಕೊಂಡು ಕೆಆರ್ ಪುರ ವಿಧಾನ ಸಭಾ  ಕ್ಷೇತ್ರದ ಬಸವನಪುರ ವಾರ್ಡ್‍ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ವಿನೋದಾ ಆತ್ಮಹತ್ಯೆಗೆ ಶರಣರಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ,  ಆತ್ಮಹತ್ಯೆಗೆ ಯಾವುದೇ ನಿಖರ ತಿಳಿದು ಬಂದಿಲ್ಲ.

ಇತ್ತೀಚೆಗಷ್ಟೇ ವಿನೋದಾ ಅಪೆಂಡಿಕ್ಸ್ ಆಪರೇಷನ್‍ಗೆ ಒಳಗಾಗಿದ್ದರು ಎನ್ನಲಾಗಿದೆ. ದಂಪತಿಗೆ ಮೂರು ವರ್ಷದ ಮಗುವಿದ್ದು, ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾಜಿ ಕಾರ್ಪೋರೇಟರ್ ಆಗಿರುವ ಜಯಪ್ರಕಾಶ್ ಸಚಿವ ಭೈರತಿ ಬಸವರಾಜ್ ಅವರ ಆಪ್ತರಾಗಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *