ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಿಬಿಎಂಪಿ ಕಾಂಟ್ರಾಕ್ಟರ್ ರಿಯಾಜುದ್ದೀನ್ ಎಂದು ಗುರುತಿಸಲಾಗಿದೆ. ಸಂಪತ್ ರಾಜ್ ಬೆಂಗಳೂರಿನಿಂದ ಎಸ್ಕೇಪ್ ಆಗಲು ಸಹಾಯ ಮಾಡಿದ್ದ ರಿಯಾಜುದ್ದೀನ್, ತಮ್ಮದೇ ವಾಹನದಲ್ಲಿ ಸಂಪತ್ ರಾಜ್ ಅವರನ್ನು ನಾಗರಹೊಳೆಯ ಫಾರ್ಮ್ ಹೌಸ್ ಗೆ ಕರೆದುಕೊಂಡು ಹೋಗಿ ಬಿಟ್ಟಿದ್ದರು.
ಈ ಪ್ರಕರಣದಲ್ಲಿ ರಿಯಾಜುದ್ದೀನ್ ಎಂಬುವವರನ್ನು ಬಂಧಿಸಲಾಗಿದ್ದು, ಸಂಪತ್ ರಾಜ್ ಅವರಿಗಾಗಿ ತೀವ್ರ ಶೋಧ ಮುಂದುವರಿದಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.



