ಅಡಿಕೆ ಕಳ್ಳರ ಬಂಧನ; 5 ಲಕ್ಷ ಮೌಲ್ಯದ ಅಡಿಕೆ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ದೊಂಬೆ ಗ್ರಾಮದಲ್ಲಿ ಐವರು ಅಡಿಕೆ ಕಳ್ಳರ ಬಂಧಿಸಲಾಗಿದ್ದು, 5ಲಕ್ಷ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ.

ಮನೆಯೊಂದರಲ್ಲಿ ದಾಸ್ತಾನು ಮಾಡಿದ್ದ 5 ಲಕ್ಷ ಮೌಲ್ಯದ ಅಡಿಕೆ, ಓಮ್ನಿ ಕಾರು ವಶಕ್ಕೆ ಪಡೆಯಲಾಗಿದೆ. 675 ಕೆಜಿ ತೂಕದ 12 ಚೀಲ ಅಡಿಕೆಯನ್ನು ಕದ್ದೊಯ್ದಿದ್ದ ಎಂಟು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಯಶೋಧರ ಅಲಿಯಾಸ್ ಗುಂಡ(23), ಮಂಜುನಾಥ್(28), ಅರುಣ್(27), ಸಂದೇಶ್ ಅಲಿಯಾಸ್ ಸ್ಯಾಂಡಿ(22), ಶಂಶಾಕ್(21), ಕಾರ್ತಿಕ್(20), ಸಂದೀಪ್(24), ಶಾರೂಕ್ ಅಲಿ(24) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಠಾಣೆಯ ಏಳು ಪ್ರಕರಣಗಳಲ್ಲಿ ಅಂದಾಜು 5 ಲಕ್ಷ ಮೌಲ್ಯದ 805 ಕೆಜಿ ಸಿಪ್ಪೆ ಗೋಟು ಅಡಿಕೆ, 70 ಕೆಜಿ ಚಾಲಿ ಅಡಿಕೆ, 349 ಕೆಜಿ ಕೆಂಪು ಅಡಿಕೆ ಮತ್ತು 200 ಕೆಜಿ ಬಿಳಿ ಗೋಟು ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಓಮ್ನಿ ಕಾರು, ಎರಡು ಬೈಕ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *