ದಾವಣಗೆರೆ: ನಗರದ ಸುಲ್ತಾನ್ ಜ್ಯುವೆಲರ್ಸ್ ಬಳಿ ವೇಗವಾಗಿ ಬಂದ ksrtc ಬಸ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಸವಾರ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶ್ರಮಜೀವಿ ಲಾಡ್ಜ್ ಮ್ಯಾನೇಜರ್ ಅಪಘಾತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾರೆ. ದಾವಣಗೆರೆಯಿಂದ ಚಿಕ್ಕಮಗಳೂರು ಕಡೆಗೆ ಹೊರಟಿದ್ದ ಬಸ್, ಸುಲ್ತಾನ್ ಜ್ಯುವೆಲರ್ಸ್ ಸಮೀಪದ ಸರ್ಕಲ್ ರಭಸವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ನ ಚಕ್ರಕ್ಕೆ ಸಿಲುಕಿಕೊಂಡ ಬೈಕ್ ನುಜ್ಜುಗುಜ್ಜಾಗಿದೆ. ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿದ ಕಾರಣ ಮ್ಯಾನೇಜರ್ ತಲೆಗೆ ದೊಡ್ಡ ಹಾನಿಯಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ರಕ್ಷಣೆ ಮಾಡಿದ್ದಾರೆ.



