ಕೇಂದ್ರದು ಕೇವಲ ಜಾತಿಗಣತಿ ಮಾತ್ರ; ರಾಜ್ಯ ಸರ್ಕಾರ ಜಾತಿ ಗಣತಿ ಜತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ; ಸಿಎಂ

ದಾವಣಗೆರೆ: ಕೇಂದ್ರ ಸರ್ಕಾರ ಕೇವಲ ಜಾತಿಗಣತಿ ಮಾತ್ರ ಮಾಡುತ್ತದೆ. ರಾಜ್ಯ ಸರ್ಕಾರ, ಜಾತಿ ಗಣತಿ ಜತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸಹ‌ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ಜಾತಿಗಣತಿಗೂ ರಾಜ್ಯದ ಸಮೀಕ್ಷೆಗೂ ವ್ಯತ್ಯಾಸವಿದೆ. ಕೇಂದ್ರ ಸರ್ಕಾರ ಕೇವಲ ಜಾತಿಯ ಜನಸಂಖ್ಯೆಯನ್ನು ಲೆಕ್ಕಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜತೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಹೀಗಾಗಿ ರಾಜ್ಯದ ಜಾತಿ ಗಣತಿ ಕೇಂದ್ರ ಸರ್ಕಾರಕ್ಕಿಂತ ಭಿನ್ನ ಎಂದರು.

ಸಾಮಾಜಿಕ ನ್ಯಾಯ ಕೊಡಲು ಸಮೀಕ್ಷೆ

ಕೇಂದ್ರ ಸರ್ಕಾರ 2027ಕ್ಕೆ ಸಮೀಕ್ಷೆ ‌ಮಾಡುವುದಾಗಿ ಹೇಳಿದೆ. ಅವರದು ಜಾತಿಗಣತಿ ಅಷ್ಟೆ.‌ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಎಲ್ಲಿಯೂ ಹೇಳಿಲ್ಲ. ಅವರು ಸಮೀಕ್ಷೆ ಮಾಡಲಿ ನಮ್ಮ ತಕರಾರಿಲ್ಲ. ನಮ್ಮದು ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ,‌ ಇದರಲ್ಲಿ ಜಾತಿಗಣತಿಯೂ ಸೇರಿರುತ್ತದೆ.ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆದಾಗ ಮಾತ್ರ ಸಾಮಾಜಿಕ ನ್ಯಾಯ ಕೊಡಲು ಸಾಧ್ಯ ಎಂದರು.

ಹೊಸದಾಗಿ ಸಮೀಕ್ಷೆ

ಎಚ್‌.ಕಾಂತರಾಜ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಕೆಲ ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಅದಕ್ಕಿಂತ ಮುಖ್ಯವಾಗಿ ಸೆಕ್ಷನ್ 11ರ ಪ್ರಕಾರ ಯಾವುದೇ ಸಮೀಕ್ಷೆ ಮಾಡಿ 10ವರ್ಷ ಆಗಿದ್ದರೆ ಹೊಸದಾಗಿ ಸಮೀಕ್ಷೆ ಮಾಡಬೇಕಾಗುತ್ತದೆ ಎಂದರು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts