Connect with us

Dvgsuddi Kannada | online news portal | Kannada news online

ಎಸ್ಸಿ, ಎಸ್ಟಿ ಸಮುದಾಯ ಪರಸ್ಪರ ಕಚ್ಚಾಟ ನಿಲ್ಲಿಸಿ ಒಂದಾಗಬೇಕು; ಮಾದಾರ ಚನ್ನಯ್ಯ ಸ್ವಾಮೀಜಿ

n314858708b9326f37f714c0d1ce40b60a7f06dbe254b08b63bea21c5f18e1775053716246

ಪ್ರಮುಖ ಸುದ್ದಿ

ಎಸ್ಸಿ, ಎಸ್ಟಿ ಸಮುದಾಯ ಪರಸ್ಪರ ಕಚ್ಚಾಟ ನಿಲ್ಲಿಸಿ ಒಂದಾಗಬೇಕು; ಮಾದಾರ ಚನ್ನಯ್ಯ ಸ್ವಾಮೀಜಿ

ದಾವಣಗೆರೆ: ವಿಧಾನಸಭೆಯಲ್ಲಿ ಎಸ್​ಸಿ, ಎಸ್​ಟಿಯ 52 ಶಾಸಕರಿದ್ದಾರೆ. ಒಟ್ಟು 52 ಶಾಸಕರಿದ್ದರೂ ಅಧಿಕಾರ ಹಿಡಿಯಲಾಗಿಲ್ಲ. ಎಸ್​ಸಿ, ಎಸ್​ಟಿ ಸಮುದಾಯದವರು ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಿ ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಸ್ವಾಭಿಮಾನಿ ಎಸ್​ಸಿ, ಎಸ್​ಟಿ ಸಂವಾದದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್​ಎಸ್​ಎಸ್​ ಒಂದಿದೆ, ಡಿಎಸ್​ಎಸ್ ಹತ್ತಾರಿವೆ. ಹತ್ತಾರು ಸಂಘಟನೆ ಮಾಡುವುದನ್ನು ನಿಲ್ಲಿಸಿ ಒಂದಾಗಬೇಕು ಎಂದರು.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಉಪಜಾತಿಗಳಿವೆ. ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ 50 ಉಪಜಾತಿಗಳಿವೆ. ಮುಂದಿನ ದಿನಗಳಲ್ಲಿ ಎಸ್​ಸಿ, ಎಸ್​ಟಿ ಸ್ವಾಮೀಜಿಗಳ ಸಭೆ ನಡೆಸುತ್ತೇವೆ. ಎಸ್​ಸಿ, ಎಸ್​ಟಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ.

ಸಭೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಪ್ರತಿಧ್ವನಿಸಿದೆ. ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಸೇರಿ ಚಿಂತನೆ ನಡೆಸಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಂಜಾರ ಗುರುಪೀಠ, ಛಲವಾದಿ ಗುರುಪೀಠದ ಶ್ರೀಗಳು ಭಾಗಿ ಆಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top