ದಾವಣಗೆರೆ: ಅತಿ ವೇಗದ ಚಾಲನೆ ಹಿನ್ನೆಲೆ ಎರಡು ಓಮ್ನಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಒಮ್ನಿಗಳು ನಜ್ಜುಗುಜ್ಜಾಗಿವೆ. ಹಲವರಿಗೆ ಗಂಭೀರ ಗಾಯಗಳಾಗಿವೆ.
ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ನಡೆದ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೂರ್ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಗಿರಿ ತಾಲೂಕಿನ ಅತ್ತಿಗೆರೆ ಗ್ರಾಮದಿಂದ ಅಮ್ಮನಗುಡ್ಡಕ್ಕೆ ಹೋಗುತ್ತಿದ್ದ ಓಮ್ನಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಡೂರು ಗ್ರಾಮದಿಂದ ಬರುತ್ತಿದ್ದ ಓಮ್ನಿ ಡಿಕ್ಕಿ ಹೊಡೆದಿದೆ.
ಎರಡು ವಾಹನಗಳು ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.



