ದಾವಣಗೆರೆ ಬೆಣ್ಣೆದೋಸೆ ಹಬ್ಬ; ಪ್ಲೇಟ್ ದೋಸೆಗೆ ರೂ.60 ನಿಗದಿ; ಶುಚಿತ್ವ, ಗುಣಮಟ್ಟ ಕಾಯ್ದುಕೊಳ್ಳುವಂತೆ ಡಿಸಿ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾವಣಗೆರೆ ಬೆಣ್ಣೆದೋಸೆಯನ್ನು ಬ್ರಾಂಡಿಂಗ್ ಮಾಡುವ ಉದ್ದೇಶದಿಂದ ಡಿ.23, 24 ಮತ್ತು 25 ರಂದು ದೋಸೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬೆಣ್ಣೆದೋಸೆಯನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರು ಬೆಣ್ಣೆ ದೋಸೆ ಹೋಟೇಲ್ ಮಾಲೀಕರಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೋತ್ಸವದ ಕುರಿತು ಬೆಣ್ಣೆ ದೋಸೆ ಹೋಟೆಲ್ ಮಾಲೀಕರೊಂದಿಗೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ನೀಡುವ ಉದ್ದೇಶದಿಂದ ಡಿ.23, 24 ಮತ್ತು 25 ರಂದು ನಗರದ ಬಾಪೂಜಿ ಎಂಬಿಎ ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗದಲ್ಲಿ ದೋಸೋತ್ಸವ ಆಯೋಜಿಸಲಾಗಿದೆ. ಬೆಳಿಗ್ಗೆ 8 ರಿಂದ ದೋಸೋತ್ಸವ ಪ್ರಾರಂಭವಾಗಲಿದ್ದು, ಒಂದು ಬೆಣ್ಣೆ ದೋಸೆಗೆ ರೂ.60 ಹಾಗೂ 1 ಪ್ಲೇಟ್ ಖಾಲಿ ದೋಸೆಗೆ ರೂ.60 ನಿಗದಿಪಡಿಸಲಾಗಿದೆ. ದೋಸೆ ಅಂಗಡಿ ಮಾಲೀಕರು ಕಾರ್ಯಕ್ರಮದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಸುಲಭ ವಿಧಾನ ಅನುಸರಿಸಬೇಕು. ಟೋಕನ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು

ಡಿ.23, 24 ರಂದು ವೀರಶೈವ ಅಧೀವೇಶನವಿರುವುದರಿಂದ ಜನಸಂದಣೆ ಹೆಚ್ಚಾಗಿರುವುದರಿಂದ ಗ್ರಾಹಕರಿಗೆ ಅರೆಬರೆ ಬೇಯಿಸಿದ ದೋಸೆ ನೀಡದೇ ಉತ್ತಮ ಗುಣಮಟ್ಟದ ಬೆಣ್ಣೆದೋಸೆಗಳನ್ನು ನೀಡಬೇಕು. ದೋಸೆ ಸ್ಟಾಲ್‍ಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿಗಳ ವ್ಯವಸ್ಥೆ ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕೆಂದರು.

ಹೋಟೆಲ್ ಮಾಲೀಕರು ತ್ಯಾಜ್ಯ ಪದಾರ್ಥಗಳನ್ನು ಆಗಿಂದಾಗ್ಗೆ ವಿಲೇವಾರಿ ಮಾಡಬೇಕು. ದೋಸೆ ತಯಾರಿಕೆಯಲ್ಲಿ ರಾಸಾಯನಿಕಗಳನ್ನು ಬಳಸಬಾರದು. ಸಂಬಂಧಿಸಿದ ಅಧಿಕಾರಿಗಳು ದೋಸೆಯ ಗುಣಮಟ್ಟ, ದೋಸೆಯ ರುಚಿ ತಪಸಾಣೆ ಸ್ಟಾಲ್ ಗಳ ವ್ಯವಸ್ಥೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ ಮರಿಹಾಳ್, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಎಂ.ಬಿ. ಅಶ್ವಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್ ಷಣ್ಮುಖಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಹೋಟೆಲ್ ಮಾಲೀಕರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *