ದಾವಣಗೆರೆ: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8) ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ(8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮ್ನ್ನು ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯ ದಿನಾಂಕದಿಂದ 7 ದಿನಗಳೊಳಗಾಗಿ ಲೆಕ್ದಕಪರಿಶೋಧಕರಿಗೆ/ಲೆಕ್ಕಪರಿಶೋಧನಾ ಫರ್ಮಿಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ತಿಳಿಸಬೇಕಾಗಿರುತ್ತದೆ.
ಜಿಲ್ಲೆಯ ಬಹುಪಾಲು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಲೆಕ್ಕಪರಿಶೋಧಕರ/ಲೆಕ್ಕಪರಿಶೋಧನಾ ಫರ್ಮಿನ ನೇಮಕಾತಿ ಬಗ್ಗೆ ಈ ಕಚೇರಿಗೆ ಮಾಹಿತಿ ಸಲ್ಲಿಸುವುದಿಲ್ಲ. ಆದ್ದರಿಂದ ಈ ವರೆಗೂ ಮಾಹಿತಿಯನ್ನು ಸಲ್ಲಿಸದ ಸರಕಾರ ಸಂಘಗಳು ಈ ಪ್ರಕಟಣೆಯ ದಿನಾಂಕದಿಂದ 3 ದಿನಗಳೊಳಗಾಗಿ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧರನ್ನು/ಲೆಕ್ಕಪರಿಶೋಧನಾ ಫರ್ಮ್ನ್ನು ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ವಾರ್ಷಿಕ ಮಹಾಸಭೆಯ ನಡವಳಿಯೊಂದಿಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪ ನಿರ್ದೇಶಕರ ಕಚೇರಿ, #257/1-5, ಮೊದಲನೇ ಮಹಡಿ, ಜನತಾ ಬಜಾರ್ ಕಟ್ಟಡ, ಮೊದಲನೇ ಮುಖ್ಯರಸ್ತೆ, ಪಿ.ಜೆ.ಬಡಾವಣೆ ದಾವಣಗೆರೆ . 577002. 08192-231351 ಇ-ಮೇಲ್: ಜಜಛಿಚಿ-ಜಚಿvಚಿಟಿಚಿgeಡಿe-ಞಚಿ@gmಚಿಚಿiಟ.ಛಿom ಕಚೇರಿಗೆ ಸಲ್ಲಿಸುವುದು. ಇಲ್ಲವಾದಲ್ಲಿ ಲೆಕ್ಕಪರಿಶೋಧನೆಯ ವಿಳಂಬಕ್ಕೆ ಸಂಬಂಧಿಸಿದ ಸಂಘಗಳ/ಸಹಕಾರಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೇ ಹೊಣೆಗಾರರು ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



