ದಾವಣಗೆರೆ: ಜಿಲ್ಲೆಯ ಎಲೆಬೇತೂರು ಗ್ರಾಮದಲ್ಲಿ ನಿನ್ನೆಯಷ್ಟೇ ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಇವತ್ತು ನಡು ರಸ್ತೆಯಲ್ಲಿಯೇ ವಿದ್ಯುತ್ ತಂತಿ ಕಟ್ ಆಗಿ ಬಿದ್ದು ಬೆಂಕಿ ಹೊತ್ತಿ ಉರಿದಿದ್ದು, ಸ್ಥಳೀಯರು ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಎಲೆಬೇತೂರಿನ ನಡು ರಸ್ತೆಯಲ್ಲಿಯೇ ವಿದ್ಯುತ್ ಕಂಬದಿಂದ ತಂತಿ ಹರಿದು ಬಿದ್ದು, ಬೆಂಕಿ ಕಿಡಿ ಹೊತ್ತಿ ಉರಿಯುತ್ತಿತ್ತು. ಆಗ ಸ್ಥಳೀಯರು ಕೂಡಲೇ ಬೆಸ್ಕಾಂ ಇಲಾಖೆ ಸಂಪರ್ಕಿಸಿ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ಲೈನ್ ಮ್ಯಾನ್ ಗಳು ದೊಡ್ಡ ದುರಂತ ತಪ್ಪಿಸಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಯಾರಿಗೂ ಹಾನಿ ಆಗಿಲ್ಲ.



