ದಾವಣಗೆರೆ: ಪ್ರತಿ ಪಡಿತರ ಕಾರ್ಡ್ ಗೆ ಒಂದು ಕೆ.ಜಿ. ಅಕ್ಕಿ ಕಡಿಮೆ ಕೊಡುತ್ತಿದ್ದ, 5 ನ್ಯಾಯ ಬೆಲೆ ಅಂಗಡಿ ಪರವಾನಗಿ ಅಮಾನತು ಮಾಡಲಾಗಿದೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ 1 ಕೆ.ಜಿ. ಅಕ್ಕಿಯನ್ನು ಕಡಿಮೆ ನೀಡುತ್ತಿದ್ದಾರೆ ಎಂಬ ದೂರು ಬಂದಿತ್ತು. ಈ ದೂರಿನ ಅನ್ವಯ ಆಹಾರ ಇಲಾಖೆಯ ಅಧಿಕಾರಿಗಳು 5 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಿದ್ದಾರೆ.
ಕೆಂಪನಹಳ್ಳಿ, ನೀತಿಗೆರೆ, ಹಿರೇಉಡ, ಮಾವಿನಹೊಳೆ ಹಾಗೂ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಪ್ರತಿ ಕಾರ್ಡ್ಗೆ 1 ಕೆ.ಜಿ.ಅಕ್ಕಿಯನ್ನು ಕಡಿಮೆ ಕೊಡುತ್ತಿದ್ದರು. ಪರಿಶೀಲನೆ ವೇಳೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 5 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಿ, ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಸ್ತುಗಳನ್ನು ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.