ದಾವಣಗೆರೆ: 60 ದಿನ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ ; ತರಬೇತಿಯಲ್ಲಿ ಉಚಿತ ವಸತಿ ಸಹಿತ 12 ಸಾವಿರ ಪ್ರೋತ್ಸಾಹ ಧನ…!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಆಗ್ರಾ ಮತ್ತು ಕೊಳ್ಕೊತ್ತಾದ ಸೆಂಟ್ರಲ್ ಫುಟ್‌ವೇರ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ 60 ದಿನಗಳ ವಸತಿ ಮ, ಪ್ರತಿ ದಿನ 200 ರೂ.ನಂತೆ 12 ಸಾವಿರ ಪ್ರೋತ್ಸಾಹ ಧನ ಸಹಿತ ಕೌಶಲ್ಯ ಅಭಿವ ತರಬೇತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ರಾಜ್ಯದ ಪಾರಂಪರಿಕ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಲಿ ಬರುವ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮೋಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರ ಪ್ರದೇಶ ಹಾಗೂ ಕೊಲ್ಕತ್ತಾ, ಪಶ್ಚಿಮ ಬಂಗಾಳದ ರಾಜ್ಯಗಳಲ್ಲಿರುವ ಮೆ|| ಸೆಂಟ್ರಲ್ ಫುಟ್‌ವೇರ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್/ಸೆಂಟರ್ ನಲ್ಲಿ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ಧಿ ತರಬೇತಿ ‘ಫುಟ್‌ವೇರ್ ಡಿಸೈನಿಂಗ್ ಅಂಡ್ ಪ್ರೊಡಕ್ಷನ್” ಪಡೆಯಲು ಕಳುಹಿಸಿಕೊಡಲಾಗುತ್ತಿದ್ದು, 10ನೇ ತರಗತಿ ಪಾಸಾಗಿರುವ 18 ರಿಂದ 40 ವರ್ಷ ವಯೋಮಿತಿಯುಳ್ಳ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ಪ್ರಯಾಣ ವೆಚ್ಚ, ಉಟೋಪಚಾರ, ವಸತಿ ವ್ಯವಸ್ಥೆಯನ್ನು ನಿಗಮದಿಂದ ಕಲ್ಪಿಸಲಾಗುವುದು, ತರಬೇತಿ ಅವಧಿಯಲ್ಲಿ ದಿನಕ್ಕೆ 200/- ರೂ.ನಂತೆ ರೂ. 12,000/-ಪಾವತಿಸಲಾಗುವುದು. ಮೊದಲನೆ ಹಂತದಲ್ಲಿ ಆಗ್ರಾ, ಉತ್ತರ ಪ್ರದೇಶದ ಮೆ|| ಸೆಂಟ್ರಲ್ ಫುಟ್‌ವೇರ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್/ಸೆಂಟರ್‌ನಲ್ಲಿ ಆಗಸ್ಟ್ 19 ರಿಂದ ಅಕ್ಟೋಬರ್ 18ರವರೆಗೆ ನಡೆಯುವ ತರಬೇತಿಗೆ ನಿಯೋಜಿಸಲಾಗುವುದು.

ಆಸಕ್ತರು ತಮ್ಮ ವೈಯಕ್ತಿಕ ವಿವರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ಪಾಸ್ ಪುಸ್ತಕದ ಜೇರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ 5 ಪೋಟೋದೊಂದಿಗೆ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ನಂ.32 ಲಿಡಕರ್ ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560052 ಈ ವಿಳಾಸಕ್ಕೆ ಜುಲೈ 31 ರೊಳಗೆ ಅಂಚೆ ಮೂಲಕ ಸಲ್ಲಿಸಬೇಕೆಂದು ಜಿಲ್ಲಾ ಸಂಯೋಜಕರಾದ ಗಂಗಾಧರ್ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್ ಸಂಪರ್ಕಿಸುವುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *