Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ. 20ರಂದು ಚನ್ನಗಿರಿಯ ‘ಮಾವಿನಹೊಳೆ ಗ್ರಾಮ’ದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಗ್ರಾಮ ವಾಸ್ತವ್ಯ‌..!

ಪ್ರಮುಖ ಸುದ್ದಿ

ದಾವಣಗೆರೆ: ಮಾ. 20ರಂದು ಚನ್ನಗಿರಿಯ ‘ಮಾವಿನಹೊಳೆ ಗ್ರಾಮ’ದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಗ್ರಾಮ ವಾಸ್ತವ್ಯ‌..!

ದಾವಣಗೆರೆ: ಮಾ.20 ರಂದು ಚನ್ನಗಿರಿ ತಾಲ್ಲೂಕಿನ ಕಸಬಾ ಮಾವಿನಹೊಳೆ ಗ್ರಾಮದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ , ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ.

ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಟಿ, ಬರ ಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹಾಗೂ ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಅಂದು ಇತ್ಯರ್ಥಪಡಿಸಲಾಗುವುದು.

ಉಳಿದ ತಾಲ್ಲೂಕುಗಳಾದ ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿಯ ಹಾಲೇಕಲ್ಲು ಗ್ರಾಮ, ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಕಂದನಕೋವಿ, ಹರಿಹರ ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಕಶೆಟ್ಟಿಹಳ್ಳಿ, ಹೊನ್ನಾಳಿ ತಾಲ್ಲೂಕಿನ ಸಾಸ್ವೇಹಳ್ಳಿ-1 ಹೋಬಳಿಯ ರಾಂಪುರ, ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿಯ ಮಾವಿನಹೊಳೆ ಗ್ರಾಮ ಹಾಗೂ ನ್ಯಾಮತಿಯ ಗೋವಿನಕೋವಿ-1 ಹೋಬಳಿಯ ಕಂಕನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top