ದಾವಣಗೆರೆ :ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಪ್ರಹ್ಲಾದ ಜೋಷಿ ಅವರು ಜ.14 ರಂದು ದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.14 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10.50 ಕ್ಕೆ ಜಿಎಂಐಟಿ ಹೆಲಿಪ್ಯಾಡ್ಗೆ ಆಗಮಿಸುವರು. ಬೆಳಿಗ್ಗೆ 11.15 ಕ್ಕೆ ರಸ್ತೆ ಮೂಲಕ ಹೊರಟು 11.30 ಕ್ಕೆ ಹರಿಹರ ತಲುಪಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳ ಪೀಠ, ಸುಕ್ಷೇತ್ರದಲ್ಲಿ ಹರಜಾತ್ರಾ ಮಹೋತ್ಸವ-2021 ರ ಅಂಗವಾಗಿ ಪೀಠದ ವತಿಯಿಂದ ಆಯೋಜಿಸಲಾಗಿರುವ ಸ್ವಾವಲಂಬಿ ಸಮಾವೇಶ-ಸಂಕ್ರಾಂತಿ ಸಂಭ್ರಮ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಕ್ಕೆ ಹುಬ್ಬಳ್ಳಿಗೆ ಪ್ರವಾಸ ಬೆಳೆಸುವರೆಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ



