ದಾವಣಗೆರೆ: ಕೊನೆ ದಿನ 20 ನಾಮಪತ್ರ ಸಹಿತ, ಇಲ್ಲಿವರೆಗೆ ಒಟ್ಟು 54 ನಾಮಪತ್ರ ಸಲ್ಲಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏಪ್ರಿಲ್ 19 ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದವರ ವಿವರ; ಬಿಜೆಪಿಯಿಂದ ಜಿ.ಎಸ್.ಗಾಯಿತ್ರಿ 3 ನಾಮಪತ್ರ, ಜಿ.ಎಂ.ಸಿದ್ದೇಶ್ವರ ಬಿಜೆಪಿ 3 ನಾಮಪತ್ರ, ದೊಡ್ಡೇಶಿ ಹೆಚ್.ಎಸ್ ಜನಹಿತ ಪಕ್ಷ, ತಿಪ್ಪೇಸ್ವಾಮಿ ಕೆ.ಎ ಸೋಷಿಯಲ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ 2 ನಾಮಪತ್ರ, ಶ್ರೀನಿವಾಸ್ ಎಂ.ಸಿ. ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ, ಕೆಆರ್‍ಎಸ್ ಪಕ್ಷದಿಂದ ಕೆ.ಎಸ್.ವೀರಭದ್ರಪ್ಪ ಉಳಿದಂತೆ ಎಲ್ಲಾ ಪಕ್ಷೇತರರಾಗಿದ್ದು ವಿನಯ್‍ಕುಮಾರ್ ಜಿ.ಬಿ ಎರಡು ನಾಮಪತ್ರ, ಪೆದ್ದಪ್ಪ ಎಸ್, ಇರ್ಪಾನುಲ್ಲಾ, ಪ್ರಸನ್ನ ಬಿ.ಆರ್, ಮೆಹಬೂಬ ಪಾಷ, ಬರ್ಕತ್ ಅಲಿಭಾಷ, ಗಾಯಿತ್ರಿ ಜಿ.ಎಂ.ಕೋಂ ಸಿದ್ದೇಶಿ, ಕರಣಂ ಕೊಟ್ರಪ್ಪ ನಾಮಪತ್ರ ಸಲ್ಲಿಸಿದವರು. ಇದುವರೆಗೆ ಒಟ್ಟು 40 ಅಭ್ಯರ್ಥಿಗಳಿಂದ 54 ನಾಮಪತ್ರಗಳು ಸಲ್ಲಿಕೆಯಾಗಿವೆ.

ಏ.12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏ.15 ರಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಹಾಗೂ ಏ.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು, ಏ.17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರ, ಏ.18 ರಂದು 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಹಾಗೂ ಕೊನೆ ದಿನ ಏ.19 ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಂದಕ್ಕಿಂತ ಹೆಚ್ಚು ನಾಮಪತ್ರ ಸಲ್ಲಿಸಿದವರು; ಕಾಂಗ್ರೆಸ್‍ನಿಂದ ಡಾ; ಪ್ರಭಾ ಮಲ್ಲಿಕಾರ್ಜುನ್ ನಾಲ್ಕು ನಾಮಪತ್ರ, ಬಿಜೆಪಿಯಿಂದ ಜಿ.ಎಸ್.ಗಾಯಿತ್ರಿ 4, ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ 3, ಕೆಆರ್‍ಎಸ್ ಪಕ್ಷದ ರಾಘವೇಂದ್ರ ಜಿ.ಪಿ 2, ಸೋಷಿಯಲ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ ತಿಪ್ಪೇಸ್ವಾಮಿ ಕೆ.ಎ 3 ನಾಮಪತ್ರ, ಪಕ್ಷೇತರರಾಗಿ ವಿನಯ್‍ಕುಮಾರ್ ಜಿ.ಬಿ. 4 ನಾಮಪತ್ರ ಸಲ್ಲಿಸಿದ್ದಾರೆ.

ಜನಹಿತ ಪಕ್ಷದ ದೊಡ್ಡೇಶಿ ಹೆಚ್.ಎಸ್ ಇವರು ಠೇವಣಿ ಹಣ ಭರಿಸಲು ರೂ.10 ಮುಖಬೆಲೆಯ ನಾಣ್ಯಗಳನ್ನು ತಂದಿದ್ದರು. ನಾಮಪತ್ರಗಳ ಪರಿಶೀಲನೆ; ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ಏಪ್ರಿಲ್ 20 ರಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *