ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ..? ಈ ಪ್ರಶ್ನೆಗೆ  ದಾವಣಗೆರೆ ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳೇ ಉತ್ತರಿಸಬೇಕು. ಅರಣ್ಯ ನಾಶ ಮಾಡಬೇಡಿ, ಹಸಿರೇ ಉಸಿರು ಎಂದು ಪುಂಕಾನು ಪುಂಕವಾಗಿ ಆದೇಶ ಹೊರಡಿಸುವ ಅಧಿಕಾರಿಗಳಿಗಳೇ ಮರಗಳ ಮಾರಣ ಹೋಮಕ್ಕೆ ಕೈ ಹಾಕಿದರೆ ಏನು ಹೇಳಬೇಕು..?

tree cut 2

ಜಿಲ್ಲಾ ಪಂಚಾಯ್ತಿ ಕಚೇರಿ ಬಳಿ ಅರಣ್ಯ ಇಲಾಖೆ ಅನುಮತಿ ಪಡೆಯದೇ 10ಕ್ಕೂ ಹೆಚ್ಚು ಮರಗಳ ಮರಣಾ ಹೋಮ ನಡೆದಿದೆ. ಈ  ಕುರಿತು ಮರ ಕಡಿಯಲು ಅನುಮತಿ ಕೊಟ್ಟ ಇಂಜಿನಿಯರ್ ಬಿಟ್ಟು  ಗುತ್ತಿಗೆದಾರ ಸೇರಿ ಮೂವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.  ಗುತ್ತಿಗೆದಾರ ಸಾಗರ್ ಹಾಗೂ ಕಾರ್ಮಿಕರಾದ ಶ್ರೀನಿವಾಸ್, ಎಲ್‌.ವಿ. ಮಂಜುನಾಥ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಪಂಚಾಯಿತಿಯ ಶೌಚಾಲಯ ಸೇರಿ ಮೂಲ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಮರ ಕಡಿಯಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಈ ಬಗ್ಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಸೊಗಸಾಗಿ ಬೆಳೆದಿದ್ದ 10ಕ್ಕೂ ಹೆಚ್ಚು ಮರಗಳನ್ನು ಕಡಿದು ನೆಲಕ್ಕೆ ಉರುಳಿಸಿದ್ದಾರೆ

ಜಿಲ್ಲಾ ಪಂಚಾಯತಿ ಇಂಜಿನಿಯರ್ ಕಾರ್ಯವನ್ನು ಕಟುವಾಗಿ ಖಂಡಿಸಿದ ಪರಿಸರ ಪ್ರೇಮಿ ಕೆ.ಟಿ. ಗೋಪಾಲಗೌಡ, ಮರ ಕಡಿದವರ ಮೇಲೆ ಕೇಸ್ ದಾಖಲಿಸಿಕೊಳ್ಳುವುದಲ್ಲ.  ಮೊದಲು ಮರ ಕಡಿಯಲು ಅನುಮತಿ ಕೊಟ್ಟ ಎಂಜಿನಿಯರ್‌ಗೆ ದಂಡ ಹಾಕಬೇಕು ಎಂದು  ಒತ್ತಾಯಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *