ದಾವಣಗೆರೆ: ಜಿಲ್ಲೆಯಲ್ಲಿ ಕಳಪೆ, ಲೂಸ್ ಬಿತ್ತನೆ ಬೀಜ ಮಾರಾಟ ಪ್ರಕರಣಗಳು ಕಂಡುಬಂದಿದ್ದು, ಈ ಬಗ್ಗೆ ರೈತರು ಬಿತ್ತನೆ ಬೀಜ ಖರೀದಿ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.ಲೂಸ್ ಬೀಜಗಳ ದಾಸ್ತಾನು, ಮಾರಾಟ ಕಂಡುಬಂದಲ್ಲಿ ಈ ನಂಬರ್ ಗೆ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗದಿಪಡಿಸಿದ ಸಹಕಾರ ಸಂಘಗಳ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿದೆ.ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ದೃಢೀಕೃತ ಬಿತ್ತನೆ ಬೀಜ ಖರೀದಿ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳಪೆ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದ್ದು, ರೈತರು ಇಂತಹ ಬೀಜಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ರೈತರು ಬಿಡಿಬೀಜಗಳನ್ನು ಬಿತ್ತನೆ ಮಾಡಿ ನಷ್ಟ ಅನುಭವಿಸಿದ್ದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ.ಹೀಗಾಗಿ ಲೂಸ್ ಬಿತ್ತನೆ ಮಾರಾಟ ಜಾಲಕ್ಕೆ ಸಿಲುಕದೇ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಬೇಕು’ ಎಂದು ಕೋರಿದ್ದಾರೆ.
ಅನಧಿಕೃತ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡುಬಂದಲ್ಲಿ ತಕ್ಷಣ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಮೊ: 8277931106, 8277931207 ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.



