ದಾವಣಗೆರೆ: ಪಹಣಿ-ಆಧಾರ್ ಜೋಡಣೆ; ಜಿಲ್ಲೆಗೆ ಪ್ರಥಮ ಸ್ಥಾನ

ದಾವಣಗೆರೆ; ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶೇ 69.97 ರಷ್ಟು ಖಾತೆದಾರರ ಆಧಾರ್‍ ನ್ನು ಪಹಣಿಗೆ ಜೋಡಿಸಿದ್ದು, ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.