ದಾವಣಗೆರೆ: ನರ್ಸಿಂಗ್ ಮರು ಪರೀಕ್ಷೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ನರ್ಸಿಂಗ್ ಮರು ಪರೀಕ್ಷೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ನಗರದ ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಡಿ. 22 ರಂದು ನರ್ಸಿಂಗ್ ಪರೀಕ್ಷೆಗಳು ಪ್ರಾರಂಭವಾಗಿ ಡಿ. 25 ರವರೆಗೆ ಮುಕ್ತಾಯವಾಗಿದೆ. 88000 ವಿದ್ಯಾರ್ಥಿಗಳು ಶ್ರಮಪಟ್ಟು. ಓದಿ ಪರೀಕ್ಷೆಗಳನ್ನು ಬರೆದಿದ್ದಾರೆ ಆದರೆ ಬೆಂಗಳೂರಿನ ಬಾಣಸವಾಡಿಯಲ್ಲಿರುವ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆದಿದೆ ಎಂದು ಮರು ಪರೀಕ್ಷೆ ನಡೆಸಲಾಗುತ್ತಿದೆ. ಈಗಾಗಲೇ ವಿದ್ಯಾರ್ಥಿಗಳು ತುಂಬಾ ಶ್ರಮಪಟ್ಟು, ನಿದ್ದೆಗೆಟ್ಟು ಪರೀಕ್ಷೆಗಳನ್ನು ಬರೆದಿರುತ್ತಾರೆ. ಏಕಾಏಕಿ ಮರುಪರೀಕ್ಷೆ ಮಾಡುವುದರಿಂದ ಇಂಥ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತದೆ. ಈಗ ಪರೀಕ್ಷೆ ಬರೆಯಲು ಜ. 21-ರಂದು ದಿನಾಂಕ ನಿಗದಿ ಮಾಡಲಾಗಿದೆ. ಆದರೆ ಕೋರ್ಟ್ ಇದಕ್ಕೆ ಸಮ್ಮತಿ ಕೊಟ್ಟಿರುವುದಿಲ್ಲ. ಮಕ್ಕಳ ಆಸಕ್ತಿಯ ಮೇರೆಗೆ ಮರುಪರೀಕ್ಷೆ ನಡೆಸುವಂತೆ ಆದೇಶ ನೀಡಿರುತ್ತದೆ.

ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡದೇ, ಸಲಹೆ ಪಡೆಯದೇ ಏಕಾಏಕಿ ಕೆಎಸ್‌ಡಿಎನ್‌ ಬೋರ್ಡಿನವರು ಈ ರೀತಿ ದಿಡೀರನೇ ದಿನಾಂಕ ಗೊತ್ತುಮಾಡಿ ಮರುಪರೀಕ್ಷೆ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ, ಪ್ರಾಮಾಣಿಕವಾಗಿ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಆದರಿಂದ ಈ ಮರುಪರೀಕ್ಷೆಯ ಅಗತ್ಯವಿರುವುದಿಲ್ಲ. ಯಾವ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆದಿದೆಯೋ ಆ ಪರೀಕ್ಷಾ ಕೇಂದ್ರಗಳ ವಿದ್ಯಾರ್ಥಿಗಳಿಗೆ ಮಾತ್ರ ಮರು ಪರೀಕ್ಷೆ ನಡೆಯಲಿ ಎಂಬುದು ಪ್ರಾಮಾಣೀಕವಾಗಿ ಬರೆದ ಎಲ್ಲಾ ವಿದ್ಯಾರ್ಥಿಗಳ ಅಳಲಾಗಿದೆ. ಆದ್ದರಿಂದ ಈ ಮರುಪರೀಕ್ಷೆಯನ್ನು ರದ್ದುಪಡಿಸಿ ಪ್ರಾಮಾಣೀಕವಾಗಿ ಬರೆದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ಕೊಳ್ಳೇರ, ವರುಣ್, ಶಶಾಂಕ್,ಶಿವಕುಮಾರ್, ರಘು, ಸಿದ್ದೇಶ್, ಅನುಷಾ ಮತ್ತಿತರರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *