ದಾವಣಗೆರೆ: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ಈ ಸಂದರ್ಭದಲ್ಲಿ ಸಲ್ಲಿಸಬಹುದಾಗಿದೆ.

ಎಸಿಬಿ ಪೊಲೀಸ್ ನಿರೀಕ್ಷಕ ಎಂ.ಕೆ. ರವೀಂದ್ರ ಅವರು ಫೆ. 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹರಿಹರ ಪ್ರವಾಸಿ ಮಂದಿರ, ಅದೇ ದಿನ ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ನ್ಯಾಮತಿ ತಹಸಿಲ್ದಾರರ ಕಚೇರಿಯಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರ ದೂರು, ಅಹವಾಲುಗಳನ್ನು ಸ್ವೀಕರಿಸುವರು.

ಎಸಿಬಿ ಪೊಲೀಸ್ ನಿರೀಕ್ಷಕ ಸಿ. ಮಧುಸೂಧನ್ ಅವರು ಫೆ. 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಚನ್ನಗಿರಿ ಪ್ರವಾಸಿ ಮಂದಿರ, ಅದೇ ದಿನ ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ಹೊನ್ನಾಳಿ ಪ್ರವಾಸಿ ಮಂದಿರದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರ ದೂರು, ಅಹವಾಲುಗಳನ್ನು ಸ್ವೀಕರಿಸುವರು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 08192-236600, ಮೊ: 9480806283 ಅಥವಾ 9480806284 ಕ್ಕೆ ಸಂಪರ್ಕಿಸಬಹುದು ಎಂದು ಎಸಿಬಿ ಪೊಲೀಸ್ ಠಾಣೆ ಡಿವೈಎಸ್‍ಪಿ ಆರ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *