ದಾವಣಗೆರೆ: ಸಿದ್ದರಾಮಯ್ಯರ 75ನೇ ಜನ್ಮದಿನ ಹಿನ್ನೆಲೆ ದಾವಣಗೆರೆಯಲ್ಲಿ ನಡೆದ ಅಮೃತ ಮಹೋತವ ಕಾರ್ಯಕ್ರಮ ಮುಗಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ.
ನಿನ್ನೆ ಬುಧವಾರ ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಗೂಡ್ಸ್ ವಾಹನ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅಡಗನಹಳ್ಳಿ ಗ್ರಾಮದ ಫಸಿ ಉದ್ದೀನ್ (51) ಮೃತಪಟ್ಟಿದ್ದಾರೆ.
ಫಸಿ ಉದ್ದೀನ್ ಸ್ನೇಹಿತರ ಜೊತೆ ದಾವಣಗೆರೆ ಕಾರ್ಯಕ್ರಮಕ್ಕೆ ಬಂದಿದ್ದರು. ಅಪಘಾತದಲ್ಲಿ 8 ಜನರಿಗೆ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಗಂಗೂರು ಬಳಿ ಅಪಘಾತ ಸಂಭವಿಸಿದೆ.



