Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಭೀಕರ ಅಪಘಾತ ; ಪಾದಚಾರಿ ಸ್ಥಳದಲ್ಲಿಯೇ ಸಾವು

death

ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ ; ಪಾದಚಾರಿ ಸ್ಥಳದಲ್ಲಿಯೇ ಸಾವು

ದಾವಣಗೆರೆ;ಬೆಣ್ಣೆನಗರಿ ದಾವಣಗೆರೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪಾದಚಾರಿ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಮೂರವರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಮೇಲಿಂದ ಮೇಲೆ ಇಂತಹ ಘಟನೆಗಳು ಆಗುತ್ತಿರುವುದರಿಂದ ರೊಚ್ಚಿಗೆದ್ದ ಸಾರ್ವಜನಿಕರಿಂದ ಬಸ್ ಗಾಜು ಪುಡಿಪುಡಿ ಮಾಡಿದ್ದಾರೆ. ಈ ಖಾಸಗಿ ಬಸ್ ಆರಾಧ್ಯ ಸ್ಟೀಲ್ ಕಂಪನಿಗೆ ಸೇರಿದ ಬಸ್ ಆಗಿದ್ದು, ನಗರದ ಅರುಣಾ ಟಾಕೀಸ್‌ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ.ಬಾರ್‌ನಲ್ಲಿ ಕೆಲಸ ಮಾಡುತಿದ್ದ ಬಸಪ್ಪ ಭೀಕರ ಅಪಘಾತದಲ್ಲಿ ಮೃತ ವ್ಯಕ್ತಿಯಾಗಿದ್ದಾರೆ.

ಕಳೆದ ಒಂದು ವಾರದಲ್ಲಿ ನಗರದಲ್ಲಿ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಒಬ್ಬ ಮೆಡಿಕಲ್ ವಿದ್ಯಾರ್ಥಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು.‌ ನಂತರ ಪಿಬಿ ರಸ್ತೆಯ ರೇಣುಕ ಮಂದಿರ ಬಳಿ ಮಹಿಳೆ ಸಾವನ್ನಪಿದ್ದರು. ಇದೀಗ ಅದೇ ಪಿಬಿ ರಸ್ತೆಯ ಅರುಣ ಚಿತ್ರ ಮಂದಿರ ಬಳಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ವಾರದಲ್ಲಿ ದಿನ ಇಂತಹ ಘಟನೆ ಆಗುತ್ತಿರುವುದರಿಂದ ಸ್ಥಳಕ್ಕೆ ಎಸ್ಪಿ ಆಗಮಿಸುವಂತೆ ಪಟ್ಟು‌ ಹಿಡಿದು ಸಾರ್ವಜನಿಕರು ಪ್ರತಿಭಟಿಸುತ್ತಿದ್ದಾರೆ.

ಸಾರ್ವಜನಿಕರ ಪ್ರತಿಭಟನೆಯಿಂದ ನಗರದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನರನ್ನು ಚದುರಿಸಿ ಟ್ರಾಫಿಕ್ ಜಾಮ್ ತೆರವುಗೊಳಿಸಿದ ಬಡಾವಣೆ ಠಾಣೆ ಪೊಲೀಸರು.ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top