ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಭರಮಸಮುದ್ರ ಕ್ರಾಸ್ ಬಳಿ ನಿನ್ನೆ ರಾತ್ರಿ ಬೈಕ್- ಆಟೋ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ.
ಚಿತ್ರದುರ್ಗದ ಹುಲ್ಕೇಹಾಳ್ ಗ್ರಾಮದ ಭರತ್ (25), ಮುದ್ದಾಪುರ ಗ್ರಾಮದ ಮಧು (26), ಕಲ್ಲೇದೇವಪುರ ಗ್ರಾಮದ ಕಲ್ಲೇಶ್ (32) ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಜಗಳೂರಿನಿಂದ ಕಲ್ಲೇದೇವಪುರಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ಭರಮಸಮುದ್ರದ ಬಳಿ ಎದುರಿಗೆ ಬಂದ ಆಟೋ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



