ದಾವಣಗೆರೆ: ಟ್ರ್ಯಾಕ್ಟರ್ -ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಬಳಿ ನಡೆದಿದೆ.
ಅಘಾಟತಕ್ಕೆ ಒಳಗಾದವರು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕು ಹುಲಿಕುಂಟೆ ಗ್ರಾಮದ ಗ್ರಾಮಸ್ಥರಾಗಿದ್ದಾರೆ. ಜಗಳೂರು ತಾಲೂಕು ಗಾಣದಕಟ್ಟೆಯಲ್ಲಿರುವ ದೇವರ ದರ್ಶನ ಮುಗಿಸಿಕೊಂಡು ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಇನ್ನು ಗೌರಿಪುರದ ಬಳಿ ಅತಿ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಪ್ಪತು ಜನ ಟ್ರ್ಯಾಕ್ಟರ್ ನಲ್ಲಿ ಪ್ರಯಾಣ ಬೆಳೆಸುತ್ತಿದ್ದರು.
ಇಪ್ಪತು ಜನರಲ್ಲಿ ಆರು ಜನರಿಗೆ ಗಂಭೀರವಾದ ಪೆಟ್ಟು ಬಿದ್ದಿವೆ. ಗಾಯಾಳುಗಳನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್ ಸರ್ಕಾರಿ ಆಸ್ಪತ್ರೆಗೆ ಗಾಯಳುಗಳನ್ನು ರವಾನಿಸಲಾಗಿದೆ. ಜಗಳೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



