Connect with us

Dvgsuddi Kannada | online news portal | Kannada news online

ದಾವಣಗೆರೆ: ಹಿಂಬದಿಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ; ಇಬ್ಬರು ಬೈಕ್ ಸವಾರರು ಸಾವು

IMG 20230214 083331

ದಾವಣಗೆರೆ

ದಾವಣಗೆರೆ: ಹಿಂಬದಿಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ; ಇಬ್ಬರು ಬೈಕ್ ಸವಾರರು ಸಾವು

ದಾವಣಗೆರೆ: ಹಿಂಬದಿಯಿಂದ ಬಂದ ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ಬಳಿ ಸಂಭವಿಸಿದೆ. ಮೃತರು ಶಿವಮೊಗ್ಗ ನಗರದವರು ಎಂದು ತಿಳಿದು ಬಂದಿದೆ.

ಪೂರ್ಯಾ ನಾಯ್ಕ್ (35) ಮೋಹನ್ ನಾಯ್ಕ್ (30 ಸಾವನ್ನಪ್ಪಿದವರಾಗಿದ್ದಾರ. ಇವರು ಭದ್ರಾವತಿ ಕಡೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಚನ್ನಗಿರಿ ರಸ್ತೆಯಲ್ಲಿ ಸಾಗುವ ವೇಳೆ ಯಮ ರೂಪದಲ್ಲಿ‌ ಬಂದ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.

ಮೃತರು ಶಿವಮೊಗ್ಗ ನಗರದ ವಿನೋಭನಗರದ ನಿವಾಸಿಗಳಾಗಿದ್ದಾರೆ. ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಹದಡಿ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top