Connect with us

Dvgsuddi Kannada | online news portal | Kannada news online

ದಾವಣಗೆರೆ; ಲಾರಿ- ಬೈಕ್ ಮುಖಾಮುಖಿ ಡಿಕ್ಕಿ; ಲಾರಿ ಚಕ್ರಕ್ಕೆ ಸಿಲುಕಿ ವೃದ್ಧ ಸಾವು

ದಾವಣಗೆರೆ

ದಾವಣಗೆರೆ; ಲಾರಿ- ಬೈಕ್ ಮುಖಾಮುಖಿ ಡಿಕ್ಕಿ; ಲಾರಿ ಚಕ್ರಕ್ಕೆ ಸಿಲುಕಿ ವೃದ್ಧ ಸಾವು

ದಾವಣಗೆರೆ; ಲಾರಿ- ಬೈಕ್ ಮುಖಾಮುಖಿ ಡಿಕ್ಕಿ; ಲಾರಿ ಚಕ್ರಕ್ಕೆ ಸಿಲುಕಿ ವೃದ್ಧ ಸಾವುದಾವಣಗೆರೆ: ಗ್ಯಾಸ್ ಸಿಲಿಂಡರ್ ಸಾಗಣೆ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವೃದ್ಧ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹರಿಹರ ನಗರದ ಹೊರ ವಲಯದ ಅಮರಾವತಿ ಕಾಲೋನಿ ಕ್ರಾಸ್ ಬಳಿ ನಡೆದಿದೆ.

ಅಮರಾವತಿ ಕಾಲೋನಿ ನಿವಾಸಿ ರೈಲ್ವೆ ಇಲಾಖೆ ನಿವೃತ್ತ ನೌಕರ ಬೂದಿಹಾಳ್ ಮಲ್ಲೇಶಪ್ಪ (77) ಮೃತ ವೃದ್ಧರಾಗಿದ್ದಾರೆ. ಹರಿಹರದ ಕಡೆಗೆ ಲಾರಿ ಸಾಗುತ್ತಿದ್ದಾಗ ಬೈಕ್‌ಗೆ ಡಿಕ್ಕಿ‌ ಹೊಡೆದಿದೆ. ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ.

ಈ ರಸ್ತೆಯಲ್ಲಿ ಭಾರಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. ಅಮರಾವತಿ ಕಾಲೋನಿ, ಕೆಎಚ್‌ಬಿ ಕಾಲೋನಿ, ಆಂಜನೇಯ ಬಡಾವಣೆ, ಜೈಭೀಮನಗರ, ದೊಗ್ಗಳ್ಳಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ವೇಗ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಜನರು ರಸ್ತೆ ತಡೆದು ಜನ ಆಕ್ರೋಶ ವ್ಯಕ್ತಪಡಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top