ದಾವಣಗೆರೆ: ಹೊಸ ವರ್ಷಾಚರಣೆಗೆಂದು ಗೋವಾ ಪ್ರವಾಸಕ್ಕೆ ಹೋಗಿ ವಾಪಾಸ್ ಬರುವಾಗ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ನಡೆದಿದೆ.
ಗುರುಮೂರ್ತಿ (35) ಮೃತ ದುರ್ದೈವಿ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಐವರು ಡಿಸೆಂಬರ್ 31 ರಂದು ಜಗಳೂರಿನಿಂದ ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ಹೊಸ ವರ್ಷಾಚರಣೆ ಮಾಡಿದ್ದಾರ. ಅಲ್ಲಿಂದ ನೇರವಾಗಿ ದಾಂಡೆಲಿಗೆ ಹೋಗಿದ್ದಾರೆ. ಇಂದು (ಜ.02) ಬೆಳಗಿನ ಜಾವ ದಾಂಡೆಲಿಯಿಂದ ವಾಪಸ್ ಊರಿಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.



