ದಾವಣಗೆರೆ: ಓಮಿನಿ ಕಾರು-ಭತ್ತದ ಹುಲ್ಲಿನ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಮನೆಯ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತಪಟ್ವರು. ರತ್ನಮ್ಮ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ವಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದ ಓಮಿನಿ, ಇನ್ನೊಂದು ಕಡೆಯಿಂದ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



