ದಾವಣಗೆರೆ: ನಗರದ ಹೊರ ವಲಯದ ಬಾಡಾ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದು, ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ನಗರದ ಆಂಜನೇಯ ಬಡಾವಣೆಯ ವಾಸಿ ದಿಲೀಪ್ ಕುಮಾರ್ (28) ಸಾವು ಕಂಡ ದುರ್ದೈವಿ ಎಂದು ಗುರುತಿಸಲಾಗಿದೆ.
ಬೈಕ್ ಸ್ಕಿಡ್ ಆಗಿದ್ದರಿಂದ ಅಪಘಾತ ಸಂಭವಿಸಿದ್ದು, ದಿಲೀಪ್ ಕುಮಾರ್ ಬೈಕ್ ಚಾಲನೆ ಮಾಡುತ್ತಿದ್ದರು. ಹಿಂಬದಿ ಕುಳಿತಿದ್ದ ವಿವೇಕಾನಂದ ಅವರ ಕಾಲಿಗೆ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ದಾವಣಗೆರೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.