ದಾವಣಗೆರೆ: ಹರಪನಹಳ್ಳಿ ತಾಲ್ಲೂಕಿನ ಪುಣಭಗಟ್ಟ ಅರಣ್ಯ ಪ್ರದೇಶ ಬಳಿ ಬೈಕ್ ವೊಂದು ನಿಯಂತ್ರಣ ಸರಕ್ಕೆ ಬಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿವೆ.
ದಾವಣಗೆರೆ ತಾಲ್ಲೂಕಿನ ಬೋರಗೊಂಡನಹಳ್ಳಿ ಕ್ರಾಸ್ನ ರಾಹುಲ್ಸಿಂಗ್ (28) ಮೃತ ವ್ಯಕ್ತಿಯಾಗಿದ್ದಾನೆ. ಗಾಯಾಳು ಪುಣಭಗಟ್ಟ ತಾಂಡದ ವಿಜಯ ಕುಮಾರ್ ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಂಡದಿಂದ ದಾವಣಗೆರೆ ಕಡೆಗೆ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಬಿದ್ದಿದೆ. ಈ ಬಗ್ಗೆ ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



