Connect with us

Dvgsuddi Kannada | online news portal | Kannada news online

ದಾವಣಗೆರೆ: ಬೈಕ್‌ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್ ; ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವು

accident 6

ದಾವಣಗೆರೆ

ದಾವಣಗೆರೆ: ಬೈಕ್‌ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್ ; ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವು

ದಾವಣಗೆರೆ: ಚನ್ನಗಿರಿ-ದಾವಣಗೆರೆ ಮುಖ್ಯ ರಸ್ತೆಯ ಆರನೇಕಲ್ಲು ಗ್ರಾಮದ ಬಳಿ ಅಪಘಾತ (Accident) ಸಂಭವಿಸಿದ್ದು, ಖಾಸಗಿ ಬಸ್ ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಮನೆಗೆ ನುಗ್ಗಿರುವ ಘಟನೆ ನಿನ್ನೆ (ಜ.30) ತಡ ರಾತ್ರಿ ನಡೆದಿದೆ.

ದಾವಣಗೆರೆ ಕಡೆಯಿಂದ ಚನ್ನಗಿರಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಕೊಂದು ಬೈಕ್ ಡಿಕ್ಕಿ ಹೊಡೆದು ನಂತರ ರಸ್ತೆಯ ಪಕ್ಕದಲ್ಲಿದ್ದ ಮನೆಗೆ ನುಗ್ಗಿದೆ. ಬಸ್ ಡಿಕ್ಕಿಯ ಹೊಡೆತಕ್ಕೆ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚನ್ನಗಿರಿ ಮುಖ್ಯ ರಸ್ತೆಯ ಆರನೇಕಲ್ ಬಳಿ ಘಟನೆ ನಡೆದಿದ್ದು, ಹದಡಿ‌ಗ್ರಾಮದ ರಾಮಪ್ಪ. (40) ಹಾಗೂ ರಾಜು. (38) ಮೃತರು ಎನ್ನಲಾಗಿದ್ದು, KA.25 C 4443 ನಂಬರ್ ಖಾಸಗಿ ಬಸ್ ದಾವಣಗೆರೆ ಯಿಂದ ಚನ್ನಗಿರಿ ಕಡೆ ಚಲಿಸುತ್ತಿದ್ದ ಬಸ್ KA17 ER 8189 ನಂಬರ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಮೃತಪಟ್ಟ ಬೈಕ್ ಸವಾರರು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಮನೆಗೆ ಡಿಕ್ಕಿ ಹೊಡೆದ ಬಸ್ ಸಂಪೂರ್ಣ ಜಖಂ ಆಗಿದ್ದು, ಮನೆ ಗೋಡೆ ಕುಸಿದು ಬಿದ್ದಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top