ದಾವಣಗೆರೆ: ಖಾಸಗಿ ಶಾಲೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ದಾವಣಗೆರೆ ತಾಲ್ಲೂಕಿನ ಆನಗೋಡು- ಶಿವಪುರ ಬಳಿ ಅಪಘಾತ ಸಂಭವಿಸಿದೆ.
ದಾವಣಗೆರೆಯ ಜೈನ್ ಪಬ್ಲಿಕ್ ಸ್ಕೂಲ್ಗೆ ಸೇರಿದ್ದ ಶಾಲಾ ಬಸ್ ಅಪಘಾತ ಸಂಭವಿಸಿದೆ. ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯವಾಗ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದ್ದು, ಸ್ಥಳೀಯರು ಮಕ್ಕಳನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ವಿಷಯ ತಿಳಿದ ತಕ್ಷಣ ಮಾಯಕೊಂಡ ಶಾಸಕ ಬಸವಂತಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದರು.



