ದಾವಣಗೆರೆ: ಕಾರು- ಬಸ್ ನಡುವೆ ಅಪಘಾತ; ಮೂವರು ಸಾವು- ಇಬ್ಬರಿಗೆ ಗಂಭೀರ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಾರು- ಖಾಸಗಿ ಬಸ್ ನಡುವೆ ಇಂದು (ಏ‌.5) ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದೆ.

ದಾವಣಗೆರೆ: ಅಡಿಕೆ‌ಗೆ ಭರ್ಜರಿ ಬೆಲೆ; 55 ಸಾವಿರ ಗಡಿಯತ್ತ ದರ; ಏ‌.4ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ

ಜಿಲ್ಲೆಯ ಅತ್ತಿಗೆರೆ ಗ್ರಾಮದ ಬಳಿಯ ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಐದು ಗಂಟೆಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಸವರಾಜಪ್ಪ (38 ವರ್ಷ), ಶ್ರೀಧರ್ (32 ವರ್ಷ) ಹಾಗೂ ವಿಜಯ್ ಕುಮಾರ್ (35 ವರ್ಷ) ಮೃತರು ಎಂದು ಗುರುತಿಸಲಾಗಿದೆ.

ದಾವಣಗೆರೆ ಕಡೆಯಿಂದ ಸಂತೇಬೆನ್ನೂರು ಕಡೆ ಹೋಗುತ್ತಿದ್ದ ಕಾರು ಹಾಗೂ ದಾವಣಗೆರೆ ಕಡೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಒಳಗಾದವರು ಬೆಳಗಾವಿ ಮೂಲದ ಕಾಗವಾಡ ತಾಲೂಕಿನ ಶಿರಗುಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *