ದಾವಣಗೆರೆ: ಕಾರು- ಖಾಸಗಿ ಬಸ್ ನಡುವೆ ಇಂದು (ಏ.5) ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದೆ.
ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; 55 ಸಾವಿರ ಗಡಿಯತ್ತ ದರ; ಏ.4ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ
ಜಿಲ್ಲೆಯ ಅತ್ತಿಗೆರೆ ಗ್ರಾಮದ ಬಳಿಯ ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಐದು ಗಂಟೆಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಸವರಾಜಪ್ಪ (38 ವರ್ಷ), ಶ್ರೀಧರ್ (32 ವರ್ಷ) ಹಾಗೂ ವಿಜಯ್ ಕುಮಾರ್ (35 ವರ್ಷ) ಮೃತರು ಎಂದು ಗುರುತಿಸಲಾಗಿದೆ.
ದಾವಣಗೆರೆ ಕಡೆಯಿಂದ ಸಂತೇಬೆನ್ನೂರು ಕಡೆ ಹೋಗುತ್ತಿದ್ದ ಕಾರು ಹಾಗೂ ದಾವಣಗೆರೆ ಕಡೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಒಳಗಾದವರು ಬೆಳಗಾವಿ ಮೂಲದ ಕಾಗವಾಡ ತಾಲೂಕಿನ ಶಿರಗುಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ.



