Connect with us

Dvgsuddi Kannada | online news portal | Kannada news online

ದಾವಣಗೆರೆ: ಬೈಕ್ ಸವಾರನ ಮೇಲೆ ಹರಿದ ಕೆಎಸ್ ಆರ್ ಟಿಸಿ ಬಸ್; ಆರ್ ಟಿಒ ಕಚೇರಿ ಅಧೀಕ್ಷಕ ಸಾ*ವು

accident 4

ದಾವಣಗೆರೆ

ದಾವಣಗೆರೆ: ಬೈಕ್ ಸವಾರನ ಮೇಲೆ ಹರಿದ ಕೆಎಸ್ ಆರ್ ಟಿಸಿ ಬಸ್; ಆರ್ ಟಿಒ ಕಚೇರಿ ಅಧೀಕ್ಷಕ ಸಾ*ವು

ದಾವಣಗೆರೆ: ಬೈಕ್ ಸವಾರನ‌ ಮೇಲೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಹರಿದ ಪರಿಣಾಮ ಆರ್ ಟಿ ಒ ಕಚೇರಿ ಅಧೀಕ್ಷಕ ಮೃ*ತಪಟ್ಟ ಘಟನೆ ನಡೆದಿದೆ.‌

ನಗರದ ರಿಂಗ್ ರಸ್ತೆಯ ಎಜು ಏಷ್ಯಾ ಸ್ಕೂಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಆರ್ ಟಿ ಒ ಕಚೇರಿ ಅಧೀಕ್ಷಕರು ಪಿ. ತಿಪ್ಪೇಶಪ್ಪ ಮೃತಪಟ್ಟ‌ ಅಧಿಕಾರಿ. ಕಚೇರಿಗೆ ಹೊಂಡಾ ಆಕ್ಟೀವಾ ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಕೂಡಲೇ ನೆಲಕ್ಕೆ‌ಬಿದ್ದ ತಿಪ್ಪೇಶಪ್ಪ‌ ಮೇಲೆ ಬಸ್ ಹಿಂಬದಿಯ ಗಾಲಿ ಹತ್ತಿದೆ. ತಲೆಗೆ ಹೆಲ್ಮೆಟ್ ಹಾಕಿದ್ದರೂ, ಹಿಂಬದಿ ಚಕ್ರ ತಲೆ ಮೇಲೆ ಹತ್ತಿದ್ದರಿಂದ ಬುರುಡೆ ಛಿದ್ರವಾಗಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತಿಪ್ಪೇಶಪ್ಪ ಅವರು ಕಳೆದ ಮೂರು ವರ್ಷಗಳ ಹಿಂದೆ ದಾವಣಗೆರೆ ವರ್ಗಾವಣೆ ಆಗಿ ಬಂದಿದ್ದರು. ಜೆ. ಹೆಚ್. ಪಟೇಲ್ ಬಡಾವಣೆಯಲ್ಲಿ ವಾಸವಿದ್ದ ಅವರು ಕಚೇರಿಗೆ ನಿತ್ಯವೂ ಬೈಕ್ ನಲ್ಲಿ ಬರುತ್ತಿದ್ದರು. ಆದ್ರೆ, ಇಂದು ಕಚೇರಿಗೆ ಹೋಗುತ್ತಿದ್ದಾಗ ರಿಂಗ್ ರಸ್ತೆಯ ಎಜು ಏಷ್ಯಾ ಸ್ಕೂಲ್ ಸಮೀಪ ದಾವಣಗೆರೆ ಕಡೆಯಿಂದ ರಾಣೇಬೆನ್ನೂರಿಗೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹೊಂಡಾ ಆಕ್ಟೀವಾಗೆ ಡಿಕ್ಕಿ ಹೊಡೆದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಜನರು ಸಾಕಷ್ಟು ಜನರಿ ಜಮಾಯಿಸಿದರು. ಕೆ ಎಸ್ ಆರ್ ಟಿ ಸಿ ಬಸ್ ಚಾಲಕನನ್ನು ನೆರೆದವರು ತರಾಟೆಗೆ ತೆಗೆದುಕೊಂಡರು. ಚಾಲಕನ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top