ದಾವಣಗೆರೆ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಟ್ರೆಲರ್ ಕಳಚಿ ಬಿದ್ದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡ ಘಟನೆ ನ್ಯಾಮತಿ ತಾಲ್ಲೂಕಿನ ಸವಳಂಗ-ಶಿಕಾರಿಪುರ ರಸ್ತೆಯ ಹಳೆಜೋಗ-ಜಯನಗರ ಗ್ರಾಮದ ಬಳಿ ನಡೆದಿದೆ.
ದಾವಣಗೆರೆ: ಹಿಂಗಾರು ಹಂಗಾಮಿನ ಬೆಳೆಗಳಿಗೆ ಫಸಲ್ ಬಿಮಾ ಯೋಜನೆ ಜಾರಿ; ಯಾವ ಬೆಳೆಗೆ ವಿಮೆ ಸೌಲಭ್ಯ..?
ಶಿಕಾರಿಪುರತಾಲ್ಲೂಕಿನ ಅತ್ತಿಬೈಲು ಗ್ರಾಮದ ಕೂಲಿ ಕಾರ್ಮಿಕ ಗುತ್ತಪ್ಪ (50) ಮತ್ತು ದುರ್ಗಮ್ಮ(53) ಮೃತಪಟ್ಟವರು. ಜಯಮ್ಮ, ಲೋಕಮ್ಮ, ಮಂಜಮ್ಮ, ನೀಲಪ್ಪ, ಕರಿಯಮ್ಮ, ಕಲ್ಪನಾ, ದುರ್ಗಮ್ಮ, ಕರಿಬಸಪ್ಪ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ.
ಮುಂದಿನ ಐದು ದಿನ ರಾಜ್ಯದ ಕೆಲ ಭಾಗದಲ್ಲಿ ಮಳೆ ಮುನ್ಸೂಚನೆ
ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪ ಗ್ರಾಮದಲ್ಲಿಮೆಕ್ಕೆಜೋಳದ ತೆನೆಮುರಿಯಲು ಅತ್ತಿಬೈಲಿನಿಂದ ಬರುವಾಗ ಈ ಅವಘಡ ನಡೆದಿದೆ. ಟ್ರ್ಯಾಕ್ಟರ್ ಚಾಲಕನ ವಿರುದ್ಧ
ಮೃತರ ಸಂಬಂಧಿ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಾಗಿದೆ.



