ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಮುಸ್ಟೂರು ಬಳಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಇನ್ ಸ್ಪೆಕ್ಟರ್ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ಉಪಚುನಾವಣೆ ಎಫೆಕ್ಟ್ ; ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು
ವಿಜಯನಗರ ಜಿಲ್ಲೆಯ ಡಿಸಿಆರ್ ಇ ಸೆಲ್ ಫಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಇನ್ ಸ್ಪೆಕ್ಟರ್ ರಘುನಾಥ್ (46) ಮೃತ ಅಧಿಕಾರಿ. ಮೂರು ದಿನ ರಜೆ ಹಾಕಿ ಚಿತ್ರದುರ್ಗ ತಾಲ್ಲೂಕಿನ ಆಯಿಕಲ್ ಗ್ರಾಮಕ್ಕೆ ತೆರಳಿದ್ದರು. ರಜೆ ಮುಗಿಸಿಕೊಂಡು ಹೊಸಪೇಟೆಗೆ ಮರಳುವಾಗ ಜಗಳೂರು ತಾಲ್ಲೂಕಿನ ಕಡಬನಕಟ್ಟೆ- ಮುಸ್ಟೂರು ಗ್ರಾಮದ ಮಧ್ಯೆ ಅಪಘಾತವಾಗಿದೆ.
ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ರಘುನಾಥ್ ಸ್ಥಳದಲ್ಲಿಯೇ ಮೃತಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



