Connect with us

Dvgsuddi Kannada | online news portal | Kannada news online

ಭೀಕರ ರಸ್ತೆ ಅಪಘಾತ :  ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿದ್ದ ವಿದ್ಯಾನಗರದ 13 ಮಂದಿ ಸಾವು ..!

ಪ್ರಮುಖ ಸುದ್ದಿ

ಭೀಕರ ರಸ್ತೆ ಅಪಘಾತ :  ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿದ್ದ ವಿದ್ಯಾನಗರದ 13 ಮಂದಿ ಸಾವು ..!

ಧಾರವಾಡ: ಸಂಕ್ರಾಂತಿ ಹಬ್ಬ ಹಿನ್ನೆಲೆ ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸ ತೆರಳುತ್ತಿದ್ಧ ಟೆಂಫೋ ಟ್ರಾವೆಲರ್ ಟಿಪ್ಪರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 13 ಮಂದಿ ಮೃತಪಟ್ಟು, 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಟಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಿನ ಜಾವ ನಡೆದಿದೆ.

  • ಅಪಘಾತದಲ್ಲಿ ತಾಯಿ ಮಗಳು ಸಾವು
  • ಎಲ್ಲರೂ ದಾವಣಗೆರೆಯ ವಿದ್ಯಾನಗರ ನಿವಾಸಿಗಳು
  • ಮಾಜಿ ಶಾಸಕ ಗುರುಸಿದ್ಧನಗೌಡ ಸೊಸೆ  ಸಾವು
  • ಸ್ತೀ ರೋಗ ತಜ್ಞೆ ವೀಣಾ ಪ್ರಕಾಶ್ ಸಾವು
  • ಎಲ್ಲರೂ ಅಪರೂಪಕ್ಕೆ ಒಂದೇ ಕಡೆ ಸೇರಿ ಟ್ರಿಪ್ ಹೊರಟಿದ್ದರು

ಗೋವಾ ಪ್ರವಾಸಕ್ಕೆ ತೆರಳಿದ್ದ ಎಲ್ಲರೂ ಒಂದೇ ಬ್ಯಾಚ್ ನ ಸ್ನೇಹಿತರಾಗಿದ್ದರು. ಎಲ್ಲರೂ ದಾವಣಗೆರೆಯ ವಿದ್ಯಾನಗರ ನಿವಾಸಿಗಳಾಗಿದ್ದರು.  ಜಗಳೂರಿನ ಮಾಜಿ ಶಾಸಕ ಗುರುಸಿದ್ಧನಗೌಡ ಸೊಸೆ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಸ್ರೀ ರೋಗ ತಜ್ಞೆ ವೀಣಾ ಪ್ರಕಾಶ್ ಕೂಡ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ತಾಯಿ-ಮಗಳು ಕೂಡ ಸಾವನ್ನಪ್ಪಿದ ಮಾಹಿತಿ ಲಭ್ಯವಾಗಿದೆ.

ಭೀಕರ ಅಪಘಾತದಲ್ಲಿ , ಮಂಜುಳಾ, ರಾಜೇಶ್ವರಿ, ಉಷಾ, ವೇದ, ಮಂಜುಳಾ ಸೇರಿದಂತೆ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 3 ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ದಾವಣಗೆರೆಯ ಲೇಡಿಸ್ ಕ್ಲಬ್‍ನ ಒಟ್ಟು 17 ಮಂದಿ ಮಹಿಳೆಯರು ಸಂಕ್ರಮಣ ಹಿನ್ನೆಲೆ ಟೆಂಫೋ ಟ್ರಾವೆಲರ್‍ನಲ್ಲಿ ಗೋವಾಕ್ಕೆ ತೆರಳುತ್ತಿದ್ದರು. ಧಾರವಾಡದ ಇಟಗಟ್ಟಿ ಬೈಪಾಸ್ ಬಳಿ ಬೆಳಗಿನ ಜಾವ 3.30ರ ಸುಮಾರಿನಲ್ಲಿ ಎದುರಿನಿಂದ ಬಂದ ಟಿಪ್ಪರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಟೆಂಫೋದಲ್ಲಿದ್ದ 10 ಮಂದಿ ಮಹಿಳೆಯರು ಮೃತಪಟ್ಟಿದ್ದು, ಟಿಪ್ಪರ್ ಚಾಲಕ ಕೂಡ ಅಸುನೀಗಿದ್ದಾನೆ. ಘಟನೆಯಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದಾಗಿ ಟೆಂಫೋ ಟ್ರಾವೆಲರ್ ಹಾಗೂ ಟಿಪ್ಪರ್‍ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಒಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟರು.ಧಾರವಾಡ ಗ್ರಾಮೀಣ ಠಾಣೆ ಸಬ್‍ಇನ್ಸ್‍ಪೆಕ್ಟರ್ ಮಹೇಂದ್ರಕುಮಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top