ದಾವಣಗೆರೆ: ಮತಾಂತರ ನಿಷೇಧ ವಿಧೇಯಕ ಅವಶ್ಯಕತೆ  ಏನಿತ್ತು..?: ನಟ ಚೇತನ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮತಾಂತರ ನಿಷೇಧ ವಿಧೇಯಕ ಜಾರಿಗೆ ವಿರೋಧ ವ್ಯಕ್ತಪಡಿಸಿದ ಚಿತ್ರನಟ ಚೇತನ್, ಈ  ಕಾಯ್ದೆ ಮಂಡನೆ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತಾಂತರ ನಿಷೇಧ ವಿಧೇಯಕ ಕಾಯ್ದೆ ಜಾರಿಗೆ ಮುಂದಾಗಿದ್ದಾರೆ. ಬೊಮ್ಮಾಯಿ ಕರ್ನಾಟಕ ಇತಿಹಾಸದಲ್ಲೇ ಕೋಮುವಾದಿ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಅವರು ಜನತಾ ಪರಿವಾರದಿಂದ ಬಂದಿದ್ದು,  ಜಾತ್ಯತೀತ ವಿಚಾರಗಳಲ್ಲಿ ನಂಬಿಕೆ ಇಟ್ಟವರು.  ಪ್ರಗತಿಪರ ಚಿಂತನೆಯುಳ್ಳವರು ಎಂಬ ಅಭಿಪ್ರಾಯವಿತ್ತು.ಆದರೆ, ಕಾಯ್ದೆ ಮಂಡನೆ ಗಮನಿಸಿದರೆ, ಕೋಮುವಾದಿ ಮುಖ್ಯಮಂತ್ರಿ ಎಂದೆನಿಸುತ್ತದೆ  ಎಂದರು.

ಬಸವರಾಜ ಬೊಮ್ಮಾಯಿ ತಂದೆ ಹಾದಿಯಲ್ಲಿಯೇ ಬೊಮ್ಮಾಯಿ ಅವರು ಕೆಲಸ ಮಾಡುತ್ತಾರೆ ಎಂಬುದು ಸುಳ್ಳಾಗಿದೆ. ಆರ್‌ಎಸ್‌ಎಸ್‌ನವರು ಹೇಳಿದ ರೀತಿಯಲ್ಲಿ ಮತಾಂತರ ನಿಷೇಧ ವಿಧೇಯಕ ಜಾರಿಗೆ ಮುಂದಾಗಿರುವುಕ್ಕೆ ನಮ್ಮ ವಿರೋಧ ಇದೆ. ಮತಾಂತರ ನಿಷೇಧ ಕಾಯ್ದೆ ವಿಧೇಯಕ ಅನ್ನುವುದೇ ಅಸಂವಿಧಾನ.‌ ಧರ್ಮ ಆಯ್ಕೆ ಮಾಡಿಕೊಳ್ಳುವುದು ಆರ್ಟಿಕಲ್ 25, 28ರಲ್ಲಿದೆ. ಹೀಗಿದ್ದಾಗ ಮತಾಂತರ ನಿಷೇಧ ಪ್ರಶ್ನೆ  ಬರುವುದಿಲ್ಲ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *