ದಾವಣಗೆರೆ: ಜಿಲ್ಲೆ ಖಾಸಗಿ ರಕ್ತ ಕೇಂದ್ರಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಎಚ್ಚರಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಸೂಚನೆ ನೀಡಿದರು.
ದಾವಣಗೆರೆ: ರೈಲ್ವೆ ಸ್ಟೇಷನ್- ಪಾಲಿಕೆ ನಡುವೆ ಪಾದಚಾರಿ ಮೇಲ್ಸೇತುವೆ; ಧೂಡಾದಿಂದ ಹೊಸ ಬಡಾವಣೆ ಅಭಿವೃದ್ಧಿ
ದರ ಪಟ್ಟಿ ಪ್ರದರ್ಶನ ಕಡ್ಡಾಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ರಕ್ತ ಕೇಂದ್ರಗಳ ಸಮನ್ವಯ ಸಭೆ, ಹೆಚ್ಐವಿ ಹಾಗೂ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಕೆಲವು ಖಾಸಗಿ ರಕ್ತ ಕೇಂದ್ರಗಳು ಪರೀಕ್ಷೆ ನಡೆಸದೆ ರಕ್ತ ಮಾರಾಟ ಮಾಡುತ್ತಿರುವ ಹಾಗೂ ಅಧಿಕ ದರ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇನ್ನು ಮುಂದೆ ರಕ್ತ ಕೇಂದ್ರಗಳ ಮುಂದೆ ದರ ಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದರು.
ದಾವಣಗೆರೆ: ಇಂಜಿನಿಯರಿಂಗ್ ಮುಗಿಸಿದ ಯುವತಿ ಲೌಕಿಕ ಜೀವನ ತ್ಯಜಿಸಿ ಆಧ್ಯಾತ್ಮದ ಕಡೆ ಒಲವು; ಸಂನ್ಯಾಸತ್ವ ಸ್ವೀಕಾರ
ರಕ್ತದಾನ ಶಿಬಿರಗಳ ಮೂಲಕ ಸಂಗ್ರಹಿಸಿದ ರಕ್ತದಲ್ಲಿ ಶೇ. 25 ರಷ್ಟನ್ನು ಜಿಲ್ಲಾಸ್ಪತ್ರೆಗೆ ನೀಡಬೇಕು.ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ವಾಗಿ ರಕ್ತ ಒದಗಿಸಬೇಕು ಎಂದು ಮಾಹಿತಿ ನೀಡಿದರು.
ಕ್ಷಯರೋಗ ಪತ್ತೆಯಾದಲ್ಲಿ 6 ರಿಂದ 9 ತಿಂಗಳು ಸತತ ಚಿಕಿತ್ಸೆ ಪಡೆದರೆ ರೋಗ ಪೂರ್ಣ ಗುಣವಾಗುತ್ತದೆ. ಖಾಸಗಿ ಆಸ್ಪತ್ರೆಗಳು ಕ್ಷಯರೋಗಿ ಗಳ ವಿವರಗಳನ್ನು ಕಡ್ಡಾಯವಾಗಿ ಜಿಲ್ಲಾಸ್ಪತ್ರೆಗೆ ಅಥವಾ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡ ಬೇಕು. ರೋಗಿಗಳಿಗೆ ಪ್ರತಿ ತಿಂಗಳು ರೂ. 1000 ಗೌರವಧನ ಹಾಗೂ ಆಹಾರ ಕಿಟ್ ನೀಡಲಾಗುತ್ತಿದೆ ಎಂದು ಎಡಿಸಿ ಮಾಹಿತಿ ನೀಡಿದರು.
ಹೆಚ್ಐವಿ ತಡೆಗೆ ಜಾಗೃತಿ ಅಗತ್ಯ: ಜಿಲ್ಲೆಯಲ್ಲಿ ಹೆಚ್ಐವಿ ಸೋಂಕಿತರ ಪ್ರಮಾಣ ಶೇ. 0.35 ರಷ್ಟಿದ್ದು, ಪ್ರತಿವರ್ಷ ಸರಾಸರಿ 200 ಪ್ರಕರಣಗಳು ಪತ್ತೆಯಾಗುತ್ತಿವೆ. ಯುವಜನತೆಯಲ್ಲಿ ಅರಿವು ಮೂಡಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬೇಕಿದೆ. ತಾಯಿಯಿಂದ ಮಗುವಿಗೆ ಸೋಂಕು ಹರಡದಂತೆ ಗರ್ಭಿಣಿಯರಿಗೆ ಕಡ್ಡಾಯವಾಗಿ ತಪಾಸಣೆ ನಡೆಸಿ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ. ಜೈಲುಗಳಲ್ಲಿಯೂ ಪ್ರತಿ ವಾರ ರಕ್ತ ಪರೀಕ್ಷೆ ಮಾಡಲಾಗುತ್ತಿದೆ. ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳ ಮೂಲಕ ಹೆಚ್.ಐ.ವಿ ಪರೀಕ್ಷೆಯನ್ನು ಕೈಗೊಳ್ಳಲಾಗಿದೆ ಎಂದು ಏಡ್ಸ್ ನಿರ್ಮೂಲನಾಧಿಕಾರಿ ಡಾ.ಮುರಳೀಧರ್ ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ವಿವಿಧ ರಕ್ತ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.



