Connect with us

Dvgsuddi Kannada | online news portal | Kannada news online

ದಾವಣಗೆರೆ: ಅಗ್ನಿವೀರ ನೇಮಕಾತಿ ಆನ್‍ ಲೈನ್ ನೋಂದಣಿಗೆ ನಾಳೆಯೇ ಕೊನೆಯ ದಿನ

IMG 20240220 195305

ದಾವಣಗೆರೆ

ದಾವಣಗೆರೆ: ಅಗ್ನಿವೀರ ನೇಮಕಾತಿ ಆನ್‍ ಲೈನ್ ನೋಂದಣಿಗೆ ನಾಳೆಯೇ ಕೊನೆಯ ದಿನ

ದಾವಣಗೆರೆ: ಮಂಗಳೂರು ಸೇನಾ ನೇಮಕಾತಿ ಕೇಂದ್ರವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್ ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಏ.22 ರಿಂದ ಪ್ರಾರಂಭವಾಗಲಿದೆ. ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸೇನೆಯಲ್ಲಿ ಜನರಲ್, ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್‍ಮನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಮತ್ತಿತರ ಹುದ್ದೆಗಳಿಗೆ ಆನ್ ಲೈನ್ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ವಯೋಮಿತಿ ಶೈಕ್ಷಣಿಕ ಅರ್ಹತೆ ಮತ್ತಿತರ ಮಾಹಿತಿಗಳನ್ನು ಅರ್ಮಿ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು (joinindianarmy.nic.in ) ವೆಬ್‍ಸೈಟ್‍ನಲ್ಲಿ ಮಾರ್ಚ್ 22ರೊಳಗೆ ಹೆಸರು ನೋಂದಣಿ ಮಾಡಬೇಕು. ಪರೀಕ್ಷೆಯ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್‍ಗೆ ಕಳುಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top