ದಾವಣಗೆರೆ: ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಗಸನಕಟ್ಟೆ ಗ್ರಾಮದಲ್ಲಿ ಮೆಕ್ಕೆಜೋಳ, ತೊಗರಿ ಮುಂಚೂಣಿ ಪ್ರಾತ್ಯಕ್ಷಿಕೆ ತಾಕಿಗೆ ವಿಜ್ಞಾನಿಗಳು ಭೇಟಿ ನೀಡಿದರು. ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿ.ಓ ಅವರು, ತೊಗರಿ ಬೆಳೆಯಲ್ಲಿ ಕುಡಿ ಚಿವುಟುವುದರಿಂದ ಹರೆ ಕೊಂಬುಗಳು ಜಾಸ್ತಿಯಾಗಿ ಇಳುವರಿಯೂ ಹೆಚ್ಚಾಗುತ್ತದೆ. ಯಾಂತ್ರಿಕೃತ ಕುಡಿ ಚಿವುಟುವ ಯಂತ್ರದ ಸಹಾಯದಿಂದ ರೈತರಿಗೆ ಪದ್ಧತಿ ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಾಯಿತು. ಆತ್ಮ ಯೋಜನೆಯ ಅಧಿಕಾರಿ ರೇಷ್ಮಾ ಹಾಗೂ ಪ್ರಗತಿಪರ ರೈತರು ಭಾಗವಹಿಸಿದ್ದರು.
ದಾವಣಗೆರೆ: ಅಗಸನಕಟ್ಟೆಯಲ್ಲಿ ಮೆಕ್ಕೆಜೋಳ, ತೊಗರಿ ಮುಂಚೂಣಿ ಪ್ರಾತ್ಯಕ್ಷಿಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



