ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುವ ರೈತರಿಗೆ ಶಾಕ್; 3 ಎಕರೆಗಿಂತ ಹೆಚ್ಚು ಭೂಮಿ ಒತ್ತುವರಿ ಮಾಡಿದ್ರೆ ಸಕ್ರಮವಿಲ್ಲ…!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದ ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿಯಲ್ಲಿ  ತೊಡಗಿದ ರೈತರಿಗೆ ಸರ್ಕಾರ ಶಾಕ್ ನೀಡಿದೆ. 3 ಎಕರೆಗಿಂತ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ‌‌ ಮಾಡುತ್ತಿರುವ ರೈತರಿಗೆ ಯಾವುದೇ ಹಕ್ಕುಪತ್ರವಾಗಲೇ ಅಥವಾ‌ ಸಕ್ರಮಗೊಳಿಸುವುದಿಲ್ಲ ಎಂದು ಸರ್ಕಾರ‌‌ ತಿಳಿಸಿದೆ.

ಈ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರುವಂತ ರೈತರಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದ್ದ 7 ಸಾವಿರ ರೈತರಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡೋದಾಗಿ ತಿಳಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರೋರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗುವುದು ಅಂತ ಹೇಳಿದ್ದಾರೆ.

ಇನ್ನೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *