Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟ ಮಾಡುವ ರೈತರು ಈ ದಾಖಲೆ ಸಲ್ಲಿಸಲು ಸೂಚನೆ

IMG 20240314 203536

ದಾವಣಗೆರೆ

ದಾವಣಗೆರೆ: ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟ ಮಾಡುವ ರೈತರು ಈ ದಾಖಲೆ ಸಲ್ಲಿಸಲು ಸೂಚನೆ

ದಾವಣಗೆರೆ: 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಗಳೂರು ರಾಗಿ ಖರೀದಿ ಕೇಂದ್ರಕ್ಕೆ ರಾಗಿಯನ್ನು ನೀಡಿರುವ ಹೊರ ತಾಲ್ಲೂಕು, ಹೊರ ಜಿಲ್ಲೆಯಲ್ಲಿನ ಪಟ್ಟಿಯಲ್ಲಿರುವ 82 ರೈತರು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.

82 ರೈತರಿಂದ ಅರ್ಹ ದಾಖಲೆಗಳನ್ನು ಸಂಗ್ರಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರು ಜಗಳೂರು ತಾಲ್ಲೂಕು ಕಚೆೆÃರಿಯ ಆಹಾರ ಶಾಖೆಯನ್ನು ಸಂಪರ್ಕಿಸಿ 7 ದಿನಗಳ ಒಳಗಾಗಿ ಸಂಬಂಧಪಟ್ಟ ದಾಖಲೆಗಳ ಜೆರಾಕ್ಸ್ ಪ್ರತಿ, 2022-23 ನೇ ಸಾಲಿನ ಮುಂಗಾರಿನ ರಾಗಿ ಬೆಳೆದ ಪಹಣಿ ಪ್ರತಿ, ಫೂಟ್ಸ್ ಐಡಿ, ಗ್ರೆನ್ ವೋಚರ್, ಆಧಾರ್ ಕಾರ್ಡ್, ವೇ-ಬ್ರಿಡ್ಜ್ ರಶೀದಿ (ಇದ್ದಲ್ಲಿ) ಪಹಣಿಯಲ್ಲಿರುವ ವಾರಸುದಾರ ಮೃತಪಟ್ಟಿದ್ದಲ್ಲಿ ವಂಶವೃಕ್ಷ ದಾಖಲೆ, ಪಹಣಿ ಜಂಟಿ ಖಾತೆಯಲ್ಲಿದ್ದರೆ, 20/-ಸ್ಟಾಂಪ್ ಪೇಪರ್ ಮೇಲೆ ನೋಟರಿಯಿಂದ ದೃಢೀಕೃತ ಒಪ್ಪಿಗೆ ಪ್ರಮಾಣ ಪತ್ರ ತಾಲ್ಲೂಕು ಕಚೇರಿ ಜಗಳೂರಿನ ಆಹಾರ ಶಾಖೆಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top