ದಾವಣಗೆರೆ: ರೈತರಿಂದ ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಅವಧಿಗೆ ಮರುವಿನ್ಯಾಸಗೊಳಿಸದ ಹವಾಮಾನ ಆಧಾರಿತ ವಿಮಾ ಯೋಜನೆಯನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸುತ್ತಿದ್ದು, ಫಸಲಿಗೆ ಬಂದ ಅಡಿಕೆ ಹಾಗೂ ಕೊಯ್ಲಿಗೆ ಬಂದ ವೀಳ್ಯೆದೆಲೆ ಬೆಳೆಗಳನ್ನು ನೋದಾಯಿಸಿಕೊಳಬಹುದಾಗಿದೆ.

ರೈತರು ಶೇ.5 ರಷ್ಟು ವಿಮಾ ಕಂತು ಪಾವತಿಸಬೇಕಿದ್ದು, ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.1,28,000 ವಿಮಾ ಮೊತ್ತಕ್ಕೆ 6400.ರೂ ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು, ಹಾಗೂ ವೀಳ್ಯೆದೆಲೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.1,17,000 ವಿಮಾ ಮೊತ್ತಕ್ಕೆ 5850.ರೂ ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು ಪಾವತಿಸಬೇಕು. ರೈತರು ವಿಮಾ ಮೊತ್ತ ಪಾವತಿಸಲು ಜೂ.30 ಕೊನೆಯ ದಿನವಾಗಿರುತ್ತದೆ. ರೈತರು ಬೆಳೆಗಳ ವಿಮೆ ಕಂತನ್ನು ತಮ್ಮ ವ್ಯಾಪ್ತಿಯ ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (CSC) ಪಾವತಿಸಿ ನೋಂದಣಿ ಮಾಡಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಜಿ.ಪಿ.ರೇಖಾ ಹರಿಹರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *