Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರಿಂದ ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ಅವಕಾಶ

ದಾವಣಗೆರೆ

ದಾವಣಗೆರೆ: ರೈತರಿಂದ ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ಅವಕಾಶ

ದಾವಣಗೆರೆ:  ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಅವಧಿಗೆ ಮರುವಿನ್ಯಾಸಗೊಳಿಸದ ಹವಾಮಾನ ಆಧಾರಿತ ವಿಮಾ ಯೋಜನೆಯನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸುತ್ತಿದ್ದು, ಫಸಲಿಗೆ ಬಂದ ಅಡಿಕೆ ಹಾಗೂ ಕೊಯ್ಲಿಗೆ ಬಂದ ವೀಳ್ಯೆದೆಲೆ ಬೆಳೆಗಳನ್ನು ನೋದಾಯಿಸಿಕೊಳಬಹುದಾಗಿದೆ.

ರೈತರು ಶೇ.5 ರಷ್ಟು ವಿಮಾ ಕಂತು ಪಾವತಿಸಬೇಕಿದ್ದು, ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.1,28,000 ವಿಮಾ ಮೊತ್ತಕ್ಕೆ 6400.ರೂ ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು, ಹಾಗೂ ವೀಳ್ಯೆದೆಲೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.1,17,000 ವಿಮಾ ಮೊತ್ತಕ್ಕೆ 5850.ರೂ ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು ಪಾವತಿಸಬೇಕು. ರೈತರು ವಿಮಾ ಮೊತ್ತ ಪಾವತಿಸಲು ಜೂ.30 ಕೊನೆಯ ದಿನವಾಗಿರುತ್ತದೆ. ರೈತರು ಬೆಳೆಗಳ ವಿಮೆ ಕಂತನ್ನು ತಮ್ಮ ವ್ಯಾಪ್ತಿಯ ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (CSC) ಪಾವತಿಸಿ ನೋಂದಣಿ ಮಾಡಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಜಿ.ಪಿ.ರೇಖಾ ಹರಿಹರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top