Connect with us

Dvgsuddi Kannada | online news portal | Kannada news online

ಪ್ರತಿ ಕ್ವಿಂಟಾಲ್ ರಾಗಿಗೆ 3,295 ರೂಪಾಯಿ ಬೆಂಬಲ ಬೆಲೆ; ಡಿ.15 ರಿಂದ ರಾಗಿ ಖರೀದಿ ಕೇಂದ್ರ ಆರಂಭ..!

ದಾವಣಗೆರೆ

ಪ್ರತಿ ಕ್ವಿಂಟಾಲ್ ರಾಗಿಗೆ 3,295 ರೂಪಾಯಿ ಬೆಂಬಲ ಬೆಲೆ; ಡಿ.15 ರಿಂದ ರಾಗಿ ಖರೀದಿ ಕೇಂದ್ರ ಆರಂಭ..!

ದಾವಣಗೆರೆ: ಜಿಲ್ಲೆಯಲ್ಲಿ ಡಿ.15 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮತ್ತು ಬಿಳಿ ಜೋಳ ಖರೀದಿ ಟಾಸ್ಕ್‍ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,  ರಾಗಿಗೆ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ರೂ.3295/- ನಿಗದಿ ಮಾಡಿದೆ. ಇದು  ಮಾರುಕಟ್ಟೆ ಬೆಲೆಗಿಂತ ಹೆಚ್ಚಾಗಿದೆ. ಹಾಗಾಗಿ ಮಧ್ಯವರ್ತಿಗಳು ಇದರ ಲಾಭ ಪಡೆಯದಂತೆ ಯೋಜನೆಯ ಪ್ರಯೋಜನ ಅರ್ಹ ರೈತರಿಗೆ ಮಾತ್ರ ದೊರೆಯುವಂತೆ ಇಲಾಖೆಗಳು ನೋಡಿಕೊಳ್ಳಬೇಕೆಂದರು.

ಜಿಲ್ಲೆಯ ಐದು ತಾಲ್ಲೂಕುಗಳಾದ ಜಗಳೂರು, ದಾವಣಗೆರೆ, ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿಯಲ್ಲಿ  ರಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಪ್ರತಿ ರೈತರು ಎಕರೆಗೆ 10 ಕ್ವಿಂಟಾಲ್‍ನಂತೆ ಗರಿಷ್ಟ 50 ಕ್ವಿಂಟಾಲ್ ರಾಗಿಯನ್ನು ಮಾರಾಟ ಮಾಡಬಹುದಾಗಿದೆ.  ನಮ್ಮಲ್ಲಿರುವ ರಾಗಿ ಬೆಳೆಯುವ ಪ್ರದೇಶದ ಅಂದಾಜಿನಂತೆ 1 ಲಕ್ಷ ಕ್ವಿಂಟಾಲ್ ರಾಗಿ ಬರಬಹುದು. ಇದಕ್ಕಿಂತ ಹೆಚ್ಚಾದಲ್ಲಿ ಮಧ್ಯವರ್ತಿಗಳು, ದಲ್ಲಾಳಿಗಳು ಲಾಭ ಪಡೆಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಖರೀದಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವವರು ಎಚ್ಚರದಿಂದ ನೋಡಿಕೊಳ್ಳಬೇಕು. ಸಂಬಂಧಿಸಿದ ತಾಲ್ಲೂಕುಗಳ ತಹಶೀಲ್ದಾರ್‍ಗಳು ಖರೀದಿ ಕೇಂದ್ರಗಳಿಗೆ ಆಗಾಗ್ಗೆ ಭೇಟಿ ನೀಡಬೇಕು. ನಾನೂ ಕೂಡ ಮಾರುವೇಷದಲ್ಲಿ ಭೇಟಿ ನೀಡಲಿದ್ದು, ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ರಾಗಿ ಮಾರಾಟ ಮಾಡುವ ರೈತರಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿರುತ್ತದೆ. ನೋಂದಣಿ ಮಾಡಿಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಲಾಗಿದೆ. ಹಾಗಾಗಿ ಕೆಲ ರೈತರಷ್ಟೇ ನೋಂದಣಿ ಮಾಡಿಕೊಂಡಿದ್ದಾರೆ  ಎಂದರು.

ಸಭೆಯಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ, ದಾವಣಗೆರೆ ತಾಲ್ಲೂಕಿನಲ್ಲಿ 404 ಹೆಕ್ಟೇರ್, ಹರಿಹರ 110, ಜಗಳೂರು 1655, ಹೊನ್ನಾಳಿ 370, ಚನ್ನಗಿರಿ 2155, ನ್ಯಾಮತಿ 90 ಹೆಕ್ಟೇರ್‍ಗಳಲ್ಲಿ ರಾಗಿ ಬೆಳೆಯಲಾಗುತ್ತಿದೆ ಎಂದರು. ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ, ಇತರೆ ಅಧಿಕಾರಿಗಳು ಇದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top